ನವದೆಹಲಿ: ದೆಹಲಿಯ ಜಾಫರಾಬಾದ್ ಪ್ರದೇಶದಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯ ಸಂದರ್ಭದಲ್ಲಿ ಪೌರತ್ವ ವಿರೋಧಿ ತಿದ್ದುಪಡಿ ಕಾಯ್ದೆ (ಸಿಎಎ) ಪ್ರತಿಭಟನಾಕಾರರು ಪೊಲೀಸರನ್ನೇ ಬೆದರಿಸುವ ಪ್ರಯತ್ನವನ್ನು ಮಾಡಿದ್ದು, ಈ ವೇಳೆ ಪಿಸ್ತೂಲ್ ತೋರಿಸಿ ಪೊಲೀಸರ ಮೇಲೆಯೇ ಗುಂಡು ಹಾರಿಸುವ ಪ್ರಯತ್ನವನ್ನು ನಡೆಸಿದ್ದಾರೆ.
ಗೋಕುಲಪುರಿಯಲ್ಲಿ ನಡೆದ ಇನ್ನೊಂದು ಹಿಂಸಾತ್ಮಕ ಪ್ರತಿಭಟನೆಯ ಸಂದರ್ಭದಲ್ಲಿ ಕಲ್ಲುತೂರಾಟಗಾರರಿಂದ ಹಲ್ಲೆಗೊಳಗಾಗಿ ಪೊಲೀಸ್ ಕಾನ್ಸ್ಸ್ಟೇಬಲ್ ರತನ್ ಲಾಲ್ ಮೃತಪಟ್ಟಿದ್ದಾರೆ.
ವ್ಯಕ್ತಿ ಪೊಲೀಸರಿಗೆ ಪಿಸ್ತೂಲ್ ತೋರಿಸುವ ವಿಡಿಯೋವನ್ನು ಪತ್ರಕರ್ತ ಸೌರಭ್ ತ್ರಿವೇದಿ ಅವರು ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಹಿಂಸಾತ್ಮಕ ಪ್ರತಿಭಟನಾಕಾರರು ಕಲ್ಲುಗಳನ್ನು ಎಸೆಯುವಲ್ಲಿ ನಿರತರಾಗಿದ್ದರು, ಈ ಸಂದರ್ಭ ಒಬ್ಬ ಪ್ರತಿಭಟನಾಕಾರ ಬಂದೂಕನ್ನು ಹಿಡಿಯುವ ಮೂಲಕ ಹಿಂಸಾಚಾರವನ್ನು ಒಂದು ಹಂತ ಮುಂದಕ್ಕೆ ಕೊಂಡೊಯ್ಯಲು ಪ್ರಯತ್ನಿಸಿದ್ದಾನೆ ಮತ್ತು ಪೊಲೀಸರನ್ನು ಬೆದರಿಸುವ ಪ್ರಯತ್ನವಾಗಿ ಪೊಲೀಸ್ ಕಾನ್ಸ್ಟೆಬಲ್ನ ತಲೆಯ ಹತ್ತಿರ ಗುಂಡು ಹಾರಿಸಲು ಪ್ರಾರಂಭಿಸಿದ್ದಾನೆ.
ಈ ವೇಳೆ ದೆಹಲಿ ಪೊಲೀಸ್ ಮುಖ್ಯ ಕಾನ್ಸ್ಟೆಬಲ್ ನೀರಜ್ ಧೈಯಾ ಅವರು ಶೂಟರ್ನನ್ನು ನಿರ್ದಾಕ್ಷಿಣ್ಯವಾಗಿ ಎದುರಿಸಿದ್ದಾರೆ.
ಈ ಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು, ಈ ವೇಳೆ ಪೊಲೀಸರು ಮಧ್ಯೆ ಪ್ರವೇಶಿಸಿ ಹಿಂಸಾಚಾರವನ್ನು ತಹಬದಿಗೆ ತರುವ ಪ್ರಯತ್ನಗಳನ್ನು ನಡೆಸಿದ್ದಾರೆ.
ಮೂಲಗಳ ಪ್ರಕಾರ, ಸಿಎಎ ಪರವಾಗಿ ಮತ್ತು ಸಿಎಎ ವಿರುದ್ಧವಾಗಿರುವವರು ಪ್ರತಿಭಟನೆಯಲ್ಲಿ ನಿರತರಾದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
An anti-CAA protester open fire in #Jaffarabad area. He pointed pistol at policeman but the cop stood firm. He fired around eight rounds. @DelhiPolice pic.twitter.com/0EOgkC6D40
— Saurabh Trivedi (@saurabh3vedi) February 24, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.