ನವದೆಹಲಿ: ದಕ್ಷಿಣ ಭಾರತದ ಹೆಮ್ಮೆ ಎನಿಸಿಕೊಂಡಿರುವ ಚಾಮರಾಜನಗರದ ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತಾರಣ್ಯವು ಔಟ್ಲುಕ್ ಟ್ರಾವೆಲರ್ನ ಅತ್ಯುತ್ತಮ ರಾಷ್ಟ್ರೀಯ ಉದ್ಯಾನ ಪ್ರಶಸ್ತಿಗೆ ಭಾಜನವಾಗಿದೆ.
ಪ್ರಶಸ್ತಿ ಪ್ರದಾನ ಸಮಾರಂಭವನ್ನು ಫೆಬ್ರವರಿ 22 ರಂದು ನವದೆಹಲಿಯಲ್ಲಿ ನಡೆಸಲಾಯಿತು, ಔಟ್ಲುಕ್ ನಿಯತಕಾಲಿಕೆಯ ಸಿಇಒ ಇಂದ್ರಾನಿಲ್ ರಾಯ್ ಅವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಇದನ್ನು ಬಂಡೀಪುರ ಟೈಗರ್ ರಿಸರ್ವ್ನ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಕ್ಷೇತ್ರ ನಿರ್ದೇಶಕ ಟಿ ಬಾಲಚಂದ್ರ ಅವರು ಸ್ವೀಕರಿಸಿದರು.
ಇತ್ತೀಚೆಗೆ ಸೂಪರ್ಸ್ಟಾರ್ ರಜನಿಕಾಂತ್ ಮತ್ತು ಬಾಲಿವುಡ್ ನಟ ಅಕ್ಷಯಕುಮಾರ್ ಅವರು ಜನಪ್ರಿಯ ಡಿಸ್ಕವರ್ ಚಾನೆಲ್ಗಾಗಿ ಮ್ಯಾನ್ Vs ವೈಲ್ಡ್ ಎಪಿಸೋಡ್ ಅನ್ನು ಬೇರ್ ಗ್ರಿಲ್ಸ್ ಅವರೊಂದಿಗೆ ಬಂಡೀಪುರದಲ್ಲಿ ಚಿತ್ರೀಕರಿಸಿದ್ದರು.
ಓದುಗರನ್ನು ಹೆಚ್ಚು ಹೆಚ್ಚು ಪ್ರಯಾಣಿಸಲು ಪ್ರಚೋದಿಸುವ ಔಟ್ಲುಕ್ ಟ್ರಾವೆಲರ್ ಆಸಕ್ತಿದಾಯಕ ಸ್ಥಳಗಳನ್ನು ಪರಿಚಯಿಸುತ್ತದೆ ಮತ್ತು ಹಿಡಿತದ ನಿರೂಪಣೆಗಳ ಮೂಲಕ ಸ್ಥಳದ ಬಗ್ಗೆ ಜನರಲ್ಲಿ ಕುತೂಹಲ ಮೂಡುವಂತೆ ಮಾಡುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.