ನವದೆಹಲಿ: ಸೋಮವಾರ ಈಶಾನ್ಯ ದೆಹಲಿಯಲ್ಲಿ ನಡೆದ ಸಿಎಎ ವಿರೋಧಿ ಹಿಂಸಾಚಾರದಲ್ಲಿ ವ್ಯಕ್ತಿಯೋರ್ವ ಪೊಲೀಸರ ಮೇಲೆ ಗುಂಡಿನ ದಾಳಿಯನ್ನು ನಡೆಸಿದ್ದಾನೆ. ಈ ದಾಳಿಕೋರನನ್ನು ಶಾರೂಖ್ ಎಂದು ಗುರುತಿಸಲಾಗಿದ್ದು, ಈತನನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.
ಹಿಂಸಾಚಾರ ನಿರತ ಗುಂಪು ನಿನ್ನೆ ಕಲ್ಲು ತೂರಾಟ, ಬೆಂಕಿ ಹಚ್ಚುವಂತಹ ಕೃತ್ಯಗಳನ್ನು ಎಸಗಿದೆ. ಈ ಸಂದರ್ಭದಲ್ಲಿ ಪ್ರತಿಭಟನಾಕಾರರ ಜೊತೆ ಇದ್ದ ಕೈಯಲ್ಲಿ ಪಿಸ್ತೂಲ್ ಹೊಂದಿದ್ದ ಕೆಂಪು ಟಿ-ಶರ್ಟ್ ಧರಿಸಿದ್ದ ಒಬ್ಬ ವ್ಯಕ್ತಿ ಪೊಲೀಸರ ಮೇಲೆ ಗುಂಡು ಹಾರಿಸಿದ್ದಾನೆ. ಈತನನ್ನು ಶಾರೂಖ್ ಎಂದು ಗುರುತಿಸಲಾಗಿದ್ದು, ಪೊಲೀಸರು ಈತನನ್ನು ಬಂಧಿಸಿ ಕಂಬಿಗಳ ಹಿಂದೆ ಇಟ್ಟಿದ್ದಾರೆ.
ದೆಹಲಿಯ ವಿವಿಧ ಭಾಗದಲ್ಲಿ ನಿನ್ನೆ ಪ್ರತಿಭಟನೆ ಭುಗಿಲೆದ್ದಿತ್ತು. ಉದ್ರಿಕ್ತರು ವಾಹನಗಳನ್ನು ಜಖಂಗೊಳಿಸಿದ್ದಾರೆ, ಅಂಗಡಿ ಮುಗ್ಗಟ್ಟುಗಳಿಗೆ ಬೆಂಕಿ ಹಚ್ಚಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಶಕ್ತಿ ಮೀರಿ ಪ್ರಯತ್ನಿಸಿದ್ದಾರೆ. ಪೊಲೀಸ್ ಕಾನ್ಸ್ಸ್ಟೇಬಲ್ ಒಬ್ಬರು ದೆಹಲಿಯ ಪ್ರತಿಭಟನೆಯ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ. 10 ಮಂದಿ ಪೊಲೀಸರಿಗೆ ಗಾಯಗಳಾಗಿವೆ. ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೃತ ಕಾನ್ಸ್ಸ್ಟೇಬಲ್ ಅವರನ್ನು ರತ್ತನ್ ಲಾಲ್ ಎಂದು ಗುರುತಿಸಲಾಗಿದೆ. ಉದ್ರಿಕ್ತ ಜನರು ಇವರ ಮೇಲೆ ಕಲ್ಲು ತೂರಾಟವನ್ನು ನಡೆಸಿದ್ದಾರೆ. ಈ ವೇಳೆ ತೀವ್ರ ಸ್ವರೂಪದಲ್ಲಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಇವರು ರಾಜಸ್ಥಾನ ಮೂಲದವರಾಗಿದ್ದು, 1998ರಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.