ಹುಬ್ಬಳ್ಳಿ: ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ದೇಶ ವಿರೋಧಿ ಚಟುವಟಿಕೆಗಳು ಗರಿಗೆದರುತ್ತಿವೆ. ಸಿಎಎ ವಿರೋಧಿ ಪ್ರತಿಭಟನೆಗಳು ಈ ಕೃತ್ಯಗಳಿಗೆ ಕುಮ್ಮಕ್ಕು ನೀಡುತ್ತಿದೆ. ಇತ್ತೀಚಿಗಷ್ಟೇ ಯುವತಿಯೊಬ್ಬಳು ವೇದಿಕೆಯಲ್ಲಿ ನಿಂತು ‘ಪಾಕಿಸ್ಥಾನ ಜಿಂದಾಬಾದ್’ ಎಂದು ಘೋಷಣೆ ಹಾಕಿದ್ದಳು. ಈ ಕೃತ್ಯದ ಬೆನ್ನಲ್ಲೇ ಇದೀಗ ಹುಬ್ಬಳ್ಳಿಯ ಬುದರ್ಸಿಂಗಿ ಗ್ರಾಮದ ಹೈಯರ್ ಪ್ರೈಮರಿ ಶಾಲೆಯ ಗೋಡೆಯಲ್ಲಿ ದೇಶ ವಿರೋಧಿ ಬರಹಗಳನ್ನು ಬರೆಯಲಾಗಿದೆ.
ಶಾಲೆಯ ಗೋಡೆ ಮತ್ತು ಬಾಗಿಲುಗಳಲ್ಲಿ ಸೋಮವಾರ ‘ಪಾಕಿಸ್ಥಾನ ಜಿಂದಾಬಾದ್’, ‘ಟಿಪ್ಪು ಸುಲ್ತಾನ’ ಎಂಬಿತ್ಯಾದ ಬರಹಗಳು ಕಂಡುಬಂದಿವೆ ಎಂದು ಧಾರವಾಡದ ಡಿಸಿಆರ್ಬಿ ಉಪ ಪೊಲೀಸ್ ವರಿಷ್ಠಾಧಿಕಾರಿ ರಾಮನ್ ಗೌಡಾ ಹಟ್ಟಿ ತಿಳಿಸಿದ್ದಾರೆ.
“ಶಾಲೆಯ ಮುಖ್ಯೋಪಾಧ್ಯಾಯರು ಗೋಡೆ ಮತ್ತು ಬಾಗಿಲುಗಳಲ್ಲಿ ಸೀಮೆಸುಣ್ಣದಿಂದ ಬರೆದ ಘೋಷಣೆಗಳನ್ನು ಗಮನಿಸಿ. ನಮಗೆ ಮಾಹಿತಿ ನೀಡಿದರು. ದೂರಿನ ಆಧಾರದ ಮೇಲೆ ನಾವು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ” ಎಂದಿದ್ದಾರೆ.
ಘೋಷಣೆಗಳನ್ನು ಕನ್ನಡ ಭಾಷೆಯಲ್ಲಿ ಬರೆಯಲಾಗಿದೆ. ಘಟನೆಯ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ಇನ್ನು ಪತ್ತೆಹಚ್ಚಬೇಕಿದೆ. ಆದರೆ ಪೊಲೀಸರು ಈಗಾಗಲೇ ಪ್ರಕರಣವನ್ನು ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಈ ಕೃತ್ಯದ ಹಿಂದೆ ಇರುವವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆಯನ್ನು ನಡೆಸಿದ್ದಾರೆ. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟು ಗ್ರಾಮಸ್ಥರೊಂದಿಗೆ ಮಾತುಕತೆಯನ್ನು ನಡೆಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.