ನವದೆಹಲಿ: ಸಂಸತ್ತಿನ ಮೇಲ್ಮನೆಯಾದ ರಾಜ್ಯಸಭೆಯ 55 ಸ್ಥಾನಗಳಿಗೆ ಮಾರ್ಚ್ 26 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಮಂಗಳವಾರ ಘೋಷಣೆ ಮಾಡಿದೆ.
ವಿವಿಧ ಸದಸ್ಯರ ನಿವೃತ್ತಿಯ ಹಿನ್ನೆಲೆಯಲ್ಲಿ ಎಪ್ರಿಲ್ ತಿಂಗಳ ವಿವಿಧ ದಿನಾಂಕದಂದು 17 ರಾಜ್ಯಗಳ 55 ರಾಜ್ಯಸಭಾ ಸ್ಥಾನಗಳು ಖಾಲಿಯಾಗಲಿವೆ. ಮೂಲಗಳ ಪ್ರಕಾರ ಈಗಾಗಲೇ ರಾಜೀನಾಮೆ ನೀಡಿರುವ ಸದಸ್ಯರ ಅವಧಿ ಕೂಡ ಏಪ್ರಿಲ್ ತಿಂಗಳಲ್ಲಿ ಮುಕ್ತಾಯವಾಗಲಿದೆ.
ಜೆಡಿಯು ಪಕ್ಷದ ಹರಿವಂಶ್, ಕೇಂದ್ರ ಸಚಿವ ರಾಮದಾಸ್ ಅಠಾವಳೆ, ಕಾಂಗ್ರೆಸ್ ಮುಖಂಡ ಮೋತಿಲಾಲ್ ವೋರಾ, ಮಾಜಿ ಕೇಂದ್ರ ಸಚಿವ ವಿಜಯ್ ಗೋಯಲ್, ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಮತ್ತು ಕಾಂಗ್ರೆಸ್ ಪಕ್ಷದ ಕುಮಾರಿ ಸೆಲ್ಜಾ ನಿವೃತ್ತಿಯಾಗಲಿರುವ ಪ್ರಮುಖ ರಾಜ್ಯಸಭಾ ಸದಸ್ಯರಾಗಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ಆರಿಸಿ ಬಂದ ಹಿನ್ನೆಲೆಯಲ್ಲಿ ಅವರ ರಾಜ್ಯಸಭಾ ಸ್ಥಾನ ಖಾಲಿಯಾಗಿದೆ. ಬಿಜೆಪಿ ಮುಖಂಡ ಅರುಣ್ ಜೇಟ್ಲಿ ಅವರ ನಿಧನದ ಕಾರಣದಿಂದಾಗಿ ಒಂದು ಸ್ಥಾನ ಖಾಲಿ ಇದೆ.
ಮಹಾರಾಷ್ಟ್ರದ 7, ತಮಿಳುನಾಡಿನ 6, ಪಶ್ಚಿಮ ಬಂಗಾಳದ 5 ಮತ್ತು ಬಿಹಾರದ 5, ಒರಿಸ್ಸಾ, ಗುಜರಾತ್ ಮತ್ತು ಆಂಧ್ರಪ್ರದೇಶದ ತಲಾ 4, ಅಸ್ಸಾಂ, ಮಧ್ಯಪ್ರದೇಶ ಮತ್ತು ರಾಜ್ಯಸ್ಥಾನದ ತಲಾ 3, ತೆಲಂಗಾಣ, ಛತ್ತಿಸ್ಗಢ, ಹರಿಯಾಣ ಮತ್ತು ಜಾರ್ಖಂಡಿನ ತಲಾ 2, ಹಿಮಾಚಲ ಪ್ರದೇಶ, ಮಣಿಪುರ ಮತ್ತು ಮೇಘಾಲಯದ ತಲಾ 1 ರಾಜ್ಯಸಭಾ ಸ್ಥಾನಗಳು ಎಪ್ರಿಲ್ ತಿಂಗಳಲ್ಲಿ ಖಾಲಿಯಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.