ಬೆಂಗಳೂರು : ಡಿಜಿಟಲ್ ಗ್ರಂಥಾಲಯ ಮತ್ತು ಡಿಜಿಟಲ್ ಗ್ರಂಥಾಲಯ ಆ್ಯಪ್ ಸೇವೆಯನ್ನು ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಕಾರ್ಯಾರಂಭಿಸಲಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಬುಧವಾರ ಇದನ್ನು ರಾಜ್ಯಕ್ಕೆ ಸಮರ್ಪಣೆ ಮಾಡಿದರು.
ಹಂಪಿನಗರದ ನಗರ ಕೇಂದ್ರ ಗ್ರಂಥಾಲಯಯದ ಗ್ರಂಥಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸಚಿವರು ಡಿಜಿಟಲ್ ಗ್ರಂಥಾಲಯ ಮತ್ತು ಡಿಜಿಟಲ್ ಗ್ರಂಥಾಲಯ ಆ್ಯಪ್ಗೆ ಚಾಲನೆ ನೀಡಿದರು. ಕರ್ನಾಟಕ ಸಾರ್ವಜನಿಕ ಗ್ರಂಥಾಲಯ ಇಲಾಖೆ ಆಶ್ರಯದಲ್ಲಿ ಈ ಕಾರ್ಯಕ್ರಮ ನೆರವೇರಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, “ತಂತ್ರಜ್ಞಾನ ಸೌಲಭ್ಯದೊಂದಿಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಡಿಜಿಟಲೀಕರಣಗೊಳಿಸುವ ಈ ಯೋಜನೆ ದೇಶದಲ್ಲೇ ಪ್ರಪ್ರಥಮ ಯೋಜನೆಯಾಗಿದೆ. ಸಾರ್ವಜನಿಕರನ್ನು ಹಾಗೂ ಓದುಗರನ್ನು ವಿಶಿಷ್ಟವಾದ ಕಲಿಕಾ ಆಯಾಮಕ್ಕೆ ತೊಡಗಿಸುವ ಸರ್ಕಾರಿ ಪ್ರೇರಿತ ಬೃಹತ್ ಅಭಿಯಾನ ಇದಾಗಿದೆ” ಎಂದಿದ್ದಾರೆ.
ಸುಮಾರು 272 ಸಾರ್ವಜನಿಕ ಗ್ರಂಥಾಲಯಗಳಲ್ಲಿ ಲಭ್ಯವಿರುವ ಹಕ್ಕುಸ್ವಾಮ್ಯ ಹೊಂದಿರುವ ಕೃತಿಗಳನ್ನು ಹೊರತುಪಡಿಸಿ ಉಳಿದೆಲ್ಲವೂ ಇನ್ನು ಮುಂದೆ ಸಾರ್ವಜನಿಕರು ತಮ್ಮ ಮೊಬೈಲ್ನಲ್ಲಿಯೇ ‘ಸಾರ್ವಜನಿಕ ಇ-ಗ್ರಂಥಾಲಯ ಆ್ಯಪ್’ ಮೂಲಕವೇ ಓದಬಹುದಾಗಿದೆ. ಸುಮಾರು ಒಂದು ಲಕ್ಷ ಪುಸ್ತಕಗಳನ್ನು ಈಗಾಗಲೇ ಆ್ಯಪ್ನಲ್ಲಿ ವೆಬ್ಸೈಟ್ನಲ್ಲಿ ಡಿಜಿಟಲೀಕರಣಗೊಂಡಿದೆ. ನಿಯತಕಾಲಿಕೆಗಳು, ಭಾಷಾ ಪುಸ್ತಕಗಳು ಒಂದೇ ವೇದಿಕೆಯಲ್ಲಿ ಸಿಗಲಿದೆ.’ ಎಂದು ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.