ನವದೆಹಲಿ: ಹಿರಿಯ ಐಪಿಎಸ್ ಅಧಿಕಾರಿ ಎಸ್ ಎನ್ ಶ್ರೀವಾಸ್ತವ ಅವರನ್ನು ದೆಹಲಿಯ ನೂತನ ಪೊಲೀಸ್ ಆಯುಕ್ತರನ್ನಾಗಿ ಕೇಂದ್ರ ಸರ್ಕಾರ ಶುಕ್ರವಾರ ನೇಮಿಸಿದೆ. ಅಮೂಲ್ಯ ಪಟ್ನಾಯಕ್ ಅವರ ಜಾಗಕ್ಕೆ ಇವರ ನೇಮಕವಾಗಿದೆ.
ಅರುಣಾಚಲ ಪ್ರದೇಶ-ಗೋವಾ-ಮಿಜೋರಾಂ ಮತ್ತು ಕೇಂದ್ರಾಡಳಿತ (AGMUT) ಕೇಡರ್ನ 1985 ರ ಬ್ಯಾಚ್ ಅಧಿಕಾರಿ ಶ್ರೀವಾಸ್ತವ ಅವರನ್ನು ಈಗಿನ ಪೊಲೀಸ್ ಆಯುಕ್ತ ಅಮೂಲ್ಯ ಪಟ್ನಾಯಕ್ ಅವರ ಜಾಗಕ್ಕೆ ನೇಮಕ ಮಾಡಲಾಗಿದೆ. ಅಮೂಲ್ಯ ಅವರ ಹುದ್ದೆಯನ್ನು ಒಂದು ತಿಂಗಳ ಅವಧಿಯವರೆಗೆ ವಿಸ್ತರಣೆ ಮಾಡಲಾಗಿತ್ತು. ಶನಿವಾರ ಅದು ಕೊನೆಗೊಳ್ಳಲಿದೆ.
ಶ್ರೀವಾಸ್ತವ ಅವರು ಪ್ರಸ್ತುತ ವಿಶೇಷ ಆಯುಕ್ತರಾಗಿದ್ದಾರೆ, ಮತ್ತು ಅವರಿಗೆ ದೆಹಲಿ ಪೊಲೀಸ್ ಆಯುಕ್ತರ ಹೆಚ್ಚುವರಿ ಜವಾಬ್ದಾರಿಯನ್ನು 2020 ರ ಮಾರ್ಚ್ 1 ರವರೆಗೆ ಅಥವಾ ಮುಂದಿನ ಆದೇಶದವರೆಗೆ ನೀಡಲಾಗಿದೆ ಎಂದು ಗೃಹ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ.
ಶ್ರೀವಾಸ್ತವ ಅವರನ್ನು ಈ ಹಿಂದೆ ಕೇಂದ್ರ ಮೀಸಲು ಪೊಲೀಸ್ ಪಡೆಯ ವಿಶೇಷ ಮಹಾನಿರ್ದೇಶಕರಾಗಿ (ತರಬೇತಿ) ನೇಮಿಸಲಾಗಿತ್ತು. ಅವರು ಎಡಿಜಿ (ಪಶ್ಚಿಮ ವಲಯ) ಆಗಿದ್ದು, 2016-17ರಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಬುರ್ಹಾನ್ ವಾನಿಯನ್ನು ಗುಂಡಿಕ್ಕಿ ಕೊಂದಾಗ ಹಿಂಸಾಚಾರದ ಉತ್ತುಂಗದಲ್ಲಿದ್ದ ಜಮ್ಮು ಮತ್ತು ಕಾಶ್ಮೀರದ ಉಸ್ತುವಾರಿಯನ್ನು ಇವರು ನೋಡಿಕೊಂಡಿದ್ದರು.
ಇದಕ್ಕೂ ಮೊದಲು ಶ್ರೀವಾಸ್ತವ ಅವರು ದೆಹಲಿ ಪೊಲೀಸ್ ವಿಶೇಷ ಘಟಕದ ಮುಖ್ಯಸ್ಥರಾಗಿದ್ದರು ಮತ್ತು ಇಂಡಿಯನ್ ಮುಜಾಹಿದ್ದೀನ್ ಕಾರ್ಯಕರ್ತರನ್ನು ಬಂಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.