ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಉತ್ತರ ಪ್ರದೇಶದ ಪ್ರಯಾಗ್ರಾಜ್ಗೆ ಆಗಮಿಸಿದ್ದು, ಅಲ್ಲಿ ಸಾಮಾಜಿಕ ಸಬಲೀಕರಣ, ಮೂಲಸೌಕರ್ಯ ಮತ್ತು ರೈತರ ಕಲ್ಯಾಣಕ್ಕೆ ಒತ್ತು ನೀಡುವ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ.
ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿಯನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ವಾಗತಿಸಿದರು.
ನಂತರ ಅವರು ಸಾಮಾಜಿಕ್ ಅಧಿಕಾರಿತಾ ಶಿಬಿರಕ್ಕೆ ಭೇಟಿ ನೀಡಿದರು. ಅಲ್ಲಿ ಹಿರಿಯ ನಾಗರಿಕರಿಗೆ ಮತ್ತು ದಿವ್ಯಾಂಗ ಜನರಿಗೆ ಸಹಾಯಕ ಸಾಧನಗಳು ಮತ್ತು ಸಲಕರಣೆಗಳನ್ನು ವಿತರಿಸಿದರು. ಈ ಮೆಗಾ ಶಿಬಿರದಲ್ಲಿ 26,000 ಕ್ಕೂ ಹೆಚ್ಚು ಫಲಾನುಭವಿಗಳಿಗೆ 56,000 ಕ್ಕೂ ಹೆಚ್ಚು ಸಹಾಯಕ ಸಲಕರಣೆ ಮತ್ತು ವಿವಿಧ ರೀತಿಯ ಸಾಧನಗಳನ್ನು ಉಚಿತವಾಗಿ ವಿತರಿಸಲಾಗಿದೆ.
ಒಟ್ಟು 19 ಕೋಟಿ ರೂಪಾಯಿಗಳ ವೆಚ್ಚದ ಸಾಧನಗಳನ್ನು ದಿವ್ಯಾಂಗ ಜನರಿಗೆ ಹಂಚಿಕೆ ಮಾಡಲಾಗಿದೆ. ದಿವ್ಯಾಂಗ ಜನರು ಮತ್ತು ಹಿರಿಯ ನಾಗರಿಕರ ದೈನಂದಿನ ಜೀವನ ಮತ್ತು ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿ ಈ ಸಲಕರಣೆಗಳು ಮತ್ತು ಸಾಧನಗಳನ್ನು ವಿತರಣೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಮೋದಿ, “ಪ್ರಯಾಗರಾಜ್ಗೆ ಬರುವುದು ಯಾವಾಗಲೂ ಪರಿಶುದ್ಧತೆ ಮತ್ತು ಶಕ್ತಿಯ ಭಾವನೆಯನ್ನು ನೀಡುತ್ತದೆ. ಕಳೆದ ವರ್ಷ ಫೆಬ್ರವರಿಯಲ್ಲಿ ಕುಂಭದ ಸಮಯದಲ್ಲಿ ನಾನು ಈ ಪವಿತ್ರ ಭೂಮಿಗೆ ಬಂದಿದ್ದೆ. ನಂತರ, ಸಂಗಮ ನದಿಯಲ್ಲಿ ಸ್ನಾನ ಮಾಡುವ ಅದೃಷ್ಟ ನನಗೆ ಸಿಕ್ಕಿತು” ಎಂದು ಎಂದಿದ್ದಾರೆ.
ಸಲಕರಣೆಗಳ ವಿತರಣಾ ಕಾರ್ಯಕ್ರಮದ ನಂತರ ಪ್ರಧಾನಿ ಮೋದಿ ಚಿತ್ರಕೂಟಕ್ಕೆ ತೆರಳಲಿದ್ದು, ಕಳೆದ ವರ್ಷ ಗೋರಖ್ಪುರದಲ್ಲಿ ಪ್ರಾರಂಭವಾದ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮನ್ ನಿಧಿಯ ಒಂದು ವರ್ಷದ ಸಂಭ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮೋದಿ ಇಂದು ಬುಂದೇಲ್ಖಂಡ್ ಎಕ್ಸ್ಪ್ರೆಸ್ ವೇ ನಿರ್ಮಣಕ್ಕೆ ಶಿಲಾನ್ಯಾಸವನ್ನು ನೆರವೇರಿಸಲಿದ್ದು, ಇದೇ ಸಂದರ್ಭದಲ್ಲಿ ದೇಶಾದ್ಯಂತ 10,000 ರೈತ ಉತ್ಪಾದಕ ಸಂಘಟನೆಗಳನ್ನು (ಎಫ್ಪಿಒ) ಪ್ರಾರಂಭಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.