ಶ್ರೀನಗರ: ಭಾರತದ ನೂತನ ಕೇಂದ್ರಾಡಳಿತ ಪ್ರದೇಶವಾದ ಜಮ್ಮು-ಕಾಶ್ಮೀರವನ್ನು ಅಭಿವೃದ್ಧಿಪಡಿಸುವ ಗುರಿಯೊಂದಿಗೆ ಭಾರತ ಸರ್ಕಾರ ಹತ್ತು ಹಲವು ಕಾರ್ಯಕ್ರಮಗಳನ್ನು ಘೋಷಣೆ ಮಾಡಿದೆ. ಕೇವಲ ಸರ್ಕಾರ ಮಾತ್ರವಲ್ಲ, ಆ ಪ್ರದೇಶದ ಭದ್ರತೆಯನ್ನು ನೋಡಿಕೊಳ್ಳುತ್ತಿರುವ ಭಾರತೀಯ ಸೇನೆ ಕೂಡ ಅಲ್ಲಿನ ಜನರ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ.
ಸೇನೆಯು ತನ್ನ ಆಪರೇಷನ್ ಗುಡ್ವಿಲ್ ಉಪಕ್ರಮದಡಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ರಿಯಾಸಿಯ ಬಗ್ಗಾ ಗ್ರಾಮದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಸ್ಮಾರ್ಟ್ ತರಗತಿ ಕೊಠಡಿಗಳನ್ನು ಸ್ಥಾಪಿಸಿದೆ.
ಈ ಬಗ್ಗೆ ರಕ್ಷಣಾ ವಕ್ತಾರರು ಮಾಹಿತಿಯನ್ನು ನೀಡಿದ್ದು, ”ಕುಗ್ರಾಮ ಪ್ರದೇಶಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಪುನರುಜ್ಜೀವನಗೊಳಿಸುವ ಸೇನೆಯ ಪ್ರಯತ್ನದ ಭಾಗವಾಗಿ ಶಾಲೆಗಳ ನವೀಕರಣ ಮತ್ತು ತಂತ್ರಜ್ಞಾನ- ಆಧಾರಿತ ಕಲಿಕೆಗಾಗಿ ಹಲವು ಶಾಲೆಗಳನ್ನು ಗುರುತಿಸಲಾಗಿದೆ” ಎಂದಿದ್ದಾರೆ.
ಒಂದು ಶಾಲೆಯ ಎರಡು ತರಗತಿ ಕೊಠಡಿಗಳನ್ನು ಸ್ಮಾರ್ಟ್ ತರಗತಿಗಾಗಿ ಪರಿವರ್ತಿಸುವುದು, ತರಗತಿಗಳ ಸಂಪೂರ್ಣ ನವೀಕರಣ, ಶಾಲೆಯ ಸೌಂದರ್ಯವನ್ನು ಹೆಚ್ಚಿಸುವುದು, ಕಲಿಕೆಯ ಸುಧಾರಣೆ, ಪುಸ್ತಕಗಳ ಸಂಗ್ರಹ, ಲೇಖನ ಸಾಮಗ್ರಿಗಳು ಮತ್ತು ಪ್ರಿಂಟರ್ ಹಂಚುವಿಕೆ ಇತ್ಯಾದಿ ಕಾರ್ಯಕ್ರಮಗಳನ್ನು ಈ ಉಪಕ್ರಮವು ಒಳಗೊಂಡಿದೆ ಎಂದು ವಕ್ತಾರರು ತಿಳಿಸಿದ್ದಾರೆ.
ಭಾನುವಾರ ನವೀಕರಿಸಿದ ಶಾಲೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಸೇನಾಧಿಕಾರಿಗಳು, ಪ್ರಾಂಶುಪಾಲರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದರಲ್ಲಿ ಒಟ್ಟು 268 ವಿದ್ಯಾರ್ಥಿಗಳು ಮತ್ತು ಸ್ಥಳೀಯರು ಭಾಗವಹಿಸಿದ್ದರು ಎಂದು ವಕ್ತಾರರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.