ಬೆಂಗಳೂರು: ಕರ್ನಾಟಕದಲ್ಲಿ ಶೀಘ್ರದಲ್ಲೇ ನ್ಯಾನೋ ಪಾರ್ಕ್ ನಿರ್ಮಾಣವಾಗಲಿದೆ. ಇದು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆ ಇದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು, ನ್ಯಾನೋ ಪಾರ್ಕ್ ನಿರ್ಮಾಣಕ್ಕೆ ಭೂಮಿಯನ್ನೂ ಅಂತಿಮಗೊಳಿಸಲಾಗಿದ್ದು, ಕೆಂದ್ರ ಸರಕಾರದ ಸಹಕಾರದೊಂದಿಗೆ ನಿರ್ಮಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಹೊಸ ಉದ್ಯಮಗಳಿಗೆ ಕೌಶಲಪೂರ್ಣ ಮತ್ತು ಕೌಶಲ್ಯ ರಹಿತ ಮಾನವ ಶಕ್ತಿಯನ್ನು ಒದಗಿಸುವ ನಿಟ್ಟಿನಲ್ಲಿಯೂ ಕ್ರಮ ಕೈಗೊಳ್ಳುವುದಾಗಿ ಅವರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಇಂಡಿಯಾ ನ್ಯಾನೋದಲ್ಲಿ ನಡೆದ ನ್ಯಾನೋ ತಂತ್ರಜ್ಞಾನದ 11 ನೇ ಆವೃತ್ತಿಯ ಸಮಾವೇಶದ ಸಂದರ್ಭ ಮಾತನಾಡಿದ ಅವರು, ”ಬೆಂಗಳೂರಿನ ಕೃಷಿ ವಿಶ್ವ ವಿದ್ಯಾಲಯದಲ್ಲಿ ಪಾರ್ಕ್ ನಿರ್ಮಾಣಕ್ಕೆ ಭೂಮಿಯನ್ನೂ ಅಂತಿಮಗೊಳಿಸಲಾಗಿದೆ. ಸರಕಾರಗಳ ನಡುವಿನ ವ್ಯವಹಾರಗಳನ್ನು ಸುಗಮವಾಗಿ ನಡೆಸುವುದಕ್ಕೆ ಬೇಕಾಗಿ ಆಯೋಗವೊಂದನ್ನು ರಚಿಸಲಾಗುತ್ತದೆ” ಎಂದಿದ್ದಾರೆ.
ಅಲ್ಲದೆ ಈ ತಂತ್ರಜ್ಞಾನ ಉನ್ನತ ಮಟ್ಟದಲ್ಲಿ ಅಭಿವೃದ್ಧಿ ಹೊಂದುವ ದೃಷ್ಟಿಯಿಂದ ನ್ಯಾನೋ ತಂತ್ರಜ್ಞಾನದಲ್ಲಿ ಪರಿಣತರಾದ, ಕೌಶಲ್ಯಗಳನ್ನು ಮೈಗೂಡಿಸಿಕೊಂಡಿರುವವರನ್ನೂ ಬಳಕೆ ಮಾಡುವುದಾಗಿ ಅವರು ಮಾಹಿತಿ ನೀಡಿದ್ದಾರೆ.
ಈ ಸಂದರ್ಭ ಮಾತನಾಡಿದ ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ್ ಅವರು, ”2013ರಲ್ಲಿ ಘೋಷಣೆ ಮಾಡಿದ ಯೋಜನೆ ಈಗ ಕಾರ್ಯರೂಪಕ್ಕೆ ಬರುತ್ತಿದೆ. ಇದಕ್ಕೆ ಸರ್ಕಾರದ ವತಿಯಿಂದ ಸಂಪೂರ್ಣ ಬೆಂಬಲ ನೀಡಲಾಗುತ್ತದೆ. ನ್ಯಾನೋ ಪಾರ್ಕ್ಗಾಗಿ ದೇವನಹಳ್ಳಿ ಸಮೀಪ ಭೂಮಿಯೂ ಲಭ್ಯವಿದೆ. ಅದನ್ನು ಉನ್ನತೀಕರಿಸುವ ನಿಟ್ಟಿನಲ್ಲಿ ಮತ್ತು ಬಯೋ ಟೆಕ್ನಾಲಜಿ ಕೇಂದ್ರ ನಿರ್ಮಿಸುವ ಸಲುವಾಗಿಯೂ ಚಿಂತನೆ ನಡೆಸಲಾಗುತ್ತಿದೆ. ಶೀಘ್ರವೇ ಇವೆಲ್ಲವೂ ಸಾಕಾರಗೊಳ್ಳಲಿದೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.