ಇಟಾನಗರ: 14 ಸಾವಿರ ಅಡಿ ಎತ್ತರದ ಪ್ರದೇಶದಲ್ಲಿ ಹಿಮಪಾತದಲ್ಲಿ ಸಿಲುಕಿ ಹಾಕಿಕೊಂಡಿದ್ದ 111 ಸ್ಥಳೀಯರು ಮತ್ತು ಪ್ರವಾಸಿಗರನ್ನು ರಕ್ಷಿಸಲು ಭಾರತೀಯ ಸೇನೆಯು ಫೆಬ್ರವರಿ 29 ರಿಂದ ಅರುಣಾಚಲ ಪ್ರದೇಶದಲ್ಲಿ ಪ್ರಮುಖ ಮಾನವೀಯ ಸ್ಥಳಾಂತರ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಮೂಲಗಳು ತಿಳಿಸಿವೆ.
ಸಿಲುಕಿ ಹಾಕಿಕೊಂಡ ನಾಗರಿಕರಿಗೆ ಸಹಾಯ ಮಾಡಲು ಭಾರತೀಯ ಸೇನೆಯ ಎರಡು ತಂಡಗಳು, ಅವರ ವೈದ್ಯಕೀಯ ಸಿಬ್ಬಂದಿ ಮತ್ತು ರಿಕವರಿ ವಾಹನಗಳು ಮಾರ್ಚ್ 1ರ ರಾತ್ರಿಯಿಡೀ ಕೆಲಸ ಮಾಡಿವೆ.
ಅರುಣಾಚಲ ಪ್ರದೇಶದ ಸೆಲಾ ಪಾಸ್ನಲ್ಲಿ ಸಬ್-ಝೀರೋ ತಾಪಮಾನದಲ್ಲಿ ಜನರು ತಮ್ಮ ವಾಹನಗಳಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಭಾರೀ ಪ್ರಮಾಣದ ಹಿಮಪಾತ ಸಂಭವಿಸಿತ್ತು, ಇದರ ಪರಿಣಾಮ ಅವರು ಆ ಜಾಗದಿಂದ ಹೊರಬರಲಾಗದೆ ಅಲ್ಲೇ ಸಿಲುಕಿ ಹಾಕಿಕೊಂಡಿದ್ದರು.
ತೊಂದರೆಗೆ ಸಿಲುಕಿ ಹಾಕಿಕೊಂಡಿದ್ದ ಸ್ಥಳೀಯರು ಮತ್ತು ಪ್ರವಾಸಿಗರಿಗೆ ಸೇನೆಯು ಬಿಸಿ ಚಹಾ, ತಿಂಡಿ ಮತ್ತು ಆಹಾರವನ್ನು ಒದಗಿಸಿದೆ. ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದ ಮುಖ್ಯಮಂತ್ರಿಗಳ ಕಚೇರಿಯು, ಭಾರತೀಯ ಸೇನೆಯ ಸಮಯೋಚಿತ ಮತ್ತು ಪರಿಣಾಮಕಾರಿ ಪ್ರತಿಕ್ರಿಯೆಗಾಗಿ ಅಭಿನಂದನೆಗಳನ್ನು ಸಲ್ಲಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.