ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಏರ್ಪಟ್ಟಿರುವ ಸುದೀರ್ಘ ಸಂಘರ್ಷವನ್ನು ಪರಿಹರಿಸುವ ನಿಟ್ಟಿನಲ್ಲಿ ಇಸ್ರೇಲ್ ಮತ್ತು ಪ್ಯಾಲೆಸ್ತೇನ್ ನಡುವೆ ಭಾರತ ಮಧ್ಯಸ್ಥಿಕೆಯನ್ನು ವಹಿಸಿಕೊಳ್ಳಬೇಕು ಎಂಬ ಆಶಯವನ್ನು ವಿಶ್ವಸಂಸ್ಥೆ ವ್ಯಕ್ತಪಡಿಸಿದೆ.
ಪ್ಯಾಲೆಸ್ತೇನಿ ಜನರ ಹಕ್ಕುಗಳ ಬಗೆಗಿನ ಯುಎನ್ ಸಮಿತಿಯ ನಿಯೋಗವು ಸೋಮವಾರದಿಂದ ನವದೆಹಲಿಗೆ ಎರಡು ದಿನಗಳ ಭೇಟಿಯನ್ನು ನೀಡಿದೆ.
ಈ ತಂಡವು ಸೆನೆಗಲ್ ಯುಎನ್ ರಾಯಭಾರಿಗಳು ಮತ್ತು ಪ್ರತಿನಿಧಿಗಳು (ಸಮಿತಿ ಅಧ್ಯಕ್ಷರು), ಇಂಡೋನೇಷ್ಯಾ ಮತ್ತು ಮಲೇಷ್ಯಾ ಸಮಿತಿ ಸದಸ್ಯರು, ಮತ್ತು ಪ್ಯಾಲೆಸ್ತೇನ್ ಸಮಿತಿ ವೀಕ್ಷಕರನ್ನು ಒಳಗೊಂಡಿದೆ.
ಅಧಿಕೃತ ಹೇಳಿಕೆಯ ಪ್ರಕಾರ, ”ನಿಯೋಗವು ಪ್ಯಾಲೆಸ್ತೇನ್ ಮತ್ತು ಇಸ್ರೇಲ್ ಎರಡರೊಂದಿಗೂ ಉತ್ತಮ ಸಂಬಂಧ ಹೊಂದಿರುವ ದೇಶವಾದ ಭಾರತವನ್ನು ಮಧ್ಯಸ್ಥಿಕೆಗೆ ತೊಡಗಿಸಿಕೊಳ್ಳುವ ಉದ್ದೇಶವನ್ನು ಒಳಗೊಂಡಿದೆ. ಅಲ್ಲದೇ, ಪ್ಯಾಲೆಸ್ತೇನ್ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಭಾರತ ಹೇಗೆ ಹೆಚ್ಚು ಸಕ್ರಿಯ ಪಾತ್ರವನ್ನು ವಹಿಸಬಲ್ಲದು ಎಂಬ ಬಗ್ಗೆ ಮಾರ್ಗಗಳನ್ನು ಅನ್ವೇಷಿಸುತ್ತಿವೆ”.
ಪ್ಯಾಲೆಸ್ತೇನ್ ಸಮಸ್ಯೆಗಳ ಶಾಂತಿಯುತ ಪರಿಹಾರಕ್ಕಾಗಿ ಯುಎನ್ ತಂಡ ಭಾರತದ ರಾಜಕೀಯ ಮತ್ತು ರಾಜತಾಂತ್ರಿಕ ಬೆಂಬಲವನ್ನು ಹೆಚ್ಚಿಸುವತ್ತ ಗಮನ ಹರಿಸಲಿದೆ ಮತ್ತು ಪ್ಯಾಲೆಸ್ತೇನ್ ರಾಷ್ಟ್ರದ ಸಿಬ್ಬಂದಿ ಮತ್ತು ಸಂಸ್ಥೆಗಳ ಸಾಮರ್ಥ್ಯ ವೃದ್ಧಿಯಲ್ಲಿ ಭಾರತೀಯ ಸಹವರ್ತಿಗಳನ್ನು ತೊಡಗಿಸಿಕೊಳ್ಳುವ ಬಗ್ಗೆ ಯೋಚಿಸುತ್ತಿದೆ.
ಯುಎನ್ ತಂಡವು ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ಸಚಿವಾಲಯದ ಹಿರಿಯ ಅಧಿಕಾರಿಗಳು, ರಾಜಕೀಯ ಮುಖಂಡರು ಮತ್ತು ಥಿಂಕ್ ಟ್ಯಾಂಕ್ಗಳೊಂದಿಗೆ ಸಭೆ ನಡೆಸಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.