ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆಯನ್ನು ನಡೆಸಿದರು. ಎರಡನೇ ಬಾರಿಗೆ ಸಿಎಂ ಆದ ಬಳಿಕ ಕೇಜ್ರಿವಾಲ್ ಅವರು ಪ್ರಧಾನಿಯವರನ್ನು ಮೊದಲ ಬಾರಿಗೆ ಭೇಟಿಯಾಗುತ್ತಿದ್ದಾರೆ.
ಇಬ್ಬರು ಮುಖಂಡರು ದೆಹಲಿ ದಂಗೆ, ಕೊರೋನವೈರಸ್ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾತುಕತೆಯನ್ನು ನಡೆಸಿದರು ಎಂದು ಮೂಲಗಳು ತಿಳಿಸಿವೆ.
ಮೋದಿ ಭೇಟಿ ಬಳಿಕ ಟ್ವೀಟ್ ಮಾಡಿರುವ ಅರವಿಂದ್ ಕೇಜ್ರಿವಾಲ್ ಅವರು, “ಮತ್ತೊಂದು ಬಾರಿ ದಂಗೆಯಂತಹ ಸ್ಥಿತಿ ದೆಹಲಿಯಲ್ಲಿ ಉದ್ಭವವಾಗದಂತೆ ನಾವು ಎಚ್ಚರಿಕೆ ವಹಿಸಬೇಕು ಎಂದು ಪ್ರಧಾನಿಯ ಬಳಿ ಹೇಳಿದೆ. ದಂಗೆಗೆ ಕಾರಣರಾದವರು ಯಾವುದೇ ಪಕ್ಷಕ್ಕೆ ಸೇರಿದರೂ ಬಿಡಬಾರದು ಎಂದು ಮನವಿ ಮಾಡಿಕೊಂಡೆ” ಎಂದಿದ್ದಾರೆ.
“ಅಲ್ಲದೇ, ಕೊರೋನವೈರಸ್ ಬಗ್ಗೆಯೂ ಚರ್ಚೆ ನಡೆಸಿದೆವು. ದೆಹಲಿಯಲ್ಲಿ ಒಂದು ಪ್ರಕರಣ ದಾಖಲಾಗಿದೆ, ಮತ್ತೊಂದು ತೆಲಂಗಾಣದಲ್ಲಿ ದಾಖಲಾಗಿದೆ. ವಿಶ್ವದಾದ್ಯಂತ ಹರಡುತ್ತಿರುವ ಮಾರಕ ಸೋಂಕು ಇದಾಗಿದೆ” ಎಂದಿದ್ದಾರೆ.
ಕಳೆದ ವಾರ ಕೇಜ್ರಿವಾಲ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ದೆಹಲಿ ದಂಗೆಯ ಬಗ್ಗೆ ಮಾತುಕತೆಯನ್ನು ನಡೆಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.