ನವದೆಹಲಿ: ಕಳೆದ ವಾರ ದೆಹಲಿಯಲ್ಲಿ ನಡೆದ ಕೋಮು ಗಲಭೆಗಳಿಗೆ ಸಂಬಂಧಿಸಿದಂತೆ ಸದನದಲ್ಲಿ ಪ್ರತಿಪಕ್ಷಗಳು ತೀವ್ರ ಗದ್ದಲವನ್ನು ಎಬ್ಬಿಸಿವೆ. ಆದರೂ ಸರ್ಕಾರ ತನ್ನ ಯೋಜನೆಯಂತೆ ಸದನವನ್ನು ಕಾರ್ಯನಿರ್ವಹಿಸಲು ಪ್ರಯತ್ನಪಡುತ್ತಿದೆ. ನಿರಂತರ ಅಡೆತಡೆಗಳ ನಡುವೆಯೂ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ‘ನಿಶಾಂಕ್’ ಅವರು ಕೇಂದ್ರ ಸಂಸ್ಕೃತ ವಿಶ್ವವಿದ್ಯಾಲಯಗಳ ಮಸೂದೆ 2019 ಅನ್ನು ಸೋಮವಾರ ರಾಜ್ಯಸಭೆಯಲ್ಲಿ ಮಂಡಿಸಿದ್ದಾರೆ.
ಈ ಮಸೂದೆಯನ್ನು 2019 ರ ಡಿಸೆಂಬರ್ 11ರಂದು ಲೋಕಸಭೆಯಲ್ಲಿ ಪರಿಚಯಿಸಲಾಯಿತು. ನಿನ್ನೆ ಈ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದೆ.
ಈ ಮಸೂದೆಯು ಭಾರತದ ಮೂರು ಪರಿಗಣಿತ ಸಂಸ್ಕೃತ ವಿಶ್ವವಿದ್ಯಾಲಯಗಳನ್ನು ಪರಿವರ್ತಿಸುವ ಉದ್ದೇಶವನ್ನು ಹೊಂದಿದೆ. ಅವುಗಳೆಂದರೆ ನವದೆಹಲಿಯ ರಾಷ್ಟ್ರೀಯ ಸಂಸ್ಕೃತ ಸಂಸ್ಥಾನ, ನವದೆಹಲಿಯ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಸಂಸ್ಕೃತ ವಿದ್ಯಾಪೀಠ ಮತ್ತು ತಿರುಪತಿಯ ರಾಷ್ಟ್ರೀಯ ಸಂಸ್ಕೃತ ವಿದ್ಯಾಪೀಠ.
ಪ್ರಸ್ತಾವಿತ ಕೇಂದ್ರೀಯ ವಿಶ್ವವಿದ್ಯಾಲಯಗಳು ಸಂಸ್ಕೃತದ ಬಗ್ಗೆ ಹೆಚ್ಚಿನ ಪ್ರಚಾರಕ್ಕಾಗಿ ಒತ್ತನ್ನು ನೀಡಲಿವೆ, ಮಾನವೀಯತೆ, ಸಾಮಾಜಿಕ ವಿಜ್ಞಾನ ಮತ್ತು ವಿಜ್ಞಾನದ ಸಮಗ್ರ ಕೋರ್ಸ್ಗಳಿಗೆ ವಿಶೇಷ ನಿಯಮಗಳನ್ನು ಹೊಂದಲಿವೆ, ಮಾನವಶಕ್ತಿಯ ಅಭಿವೃದ್ಧಿ ಮತ್ತು ಸಂರಕ್ಷಣೆಗಾಗಿ ಸಂಸ್ಕೃತ ಮತ್ತು ಸಂಬಂಧಿತ ವಿಷಯಗಳನ್ನು ಈ ವಿಶ್ವವಿದ್ಯಾನಿಲಯಗಳು ಒದಗಿಸಲಿವೆ.
ಎಲ್ಲಾ ಕೇಂದ್ರ ವಿಶ್ವವಿದ್ಯಾಲಯಗಳಂತೆ ಭಾರತದ ರಾಷ್ಟ್ರಪತಿಗಳು ಕೇಂದ್ರ ಸಂಸ್ಕೃತ ವಿಶ್ವವಿದ್ಯಾಲಯಗಳ ಸಂದರ್ಶಕರಾಗಲಿದ್ದಾರೆ. ಅವರು ವಿಶ್ವವಿದ್ಯಾಲಯದ ಕಾರ್ಯವೈಖರಿಯನ್ನು ಪರಿಶೀಲಿಸಲು ವ್ಯಕ್ತಿಗಳನ್ನು ನೇಮಿಸಲಿದ್ದಾರೆ.
ಅಧ್ಯಯನದ ಕೋರ್ಸ್ಗಳನ್ನು ಸೂಚಿಸುವುದು ಮತ್ತು ತರಬೇತಿ ಕಾರ್ಯಕ್ರಮಗಳನ್ನು ನಡೆಸುವ ಕಾರ್ಯವನ್ನು ಈ ಸಂಸ್ಕೃತ ವಿಶ್ವವಿದ್ಯಾಲಯಗಳು ಮಾಡಲಿವೆ. ಅಲ್ಲದೇ, ಪದವಿಗಳು, ಡಿಪ್ಲೊಮಾಗಳು ಮತ್ತು ಪ್ರಮಾಣಪತ್ರಗಳನ್ನು ನೀಡಲಿವೆ. ದೂರ ಶಿಕ್ಷಣ ವ್ಯವಸ್ಥೆಗೂ ಸೌಲಭ್ಯಗಳನ್ನು ಒದಗಿಸಲಿವೆ, ಕಾಲೇಜು ಅಥವಾ ಸಂಸ್ಥೆಗಳಿಗೆ ಸ್ವಾಯತ್ತ ಸ್ಥಾನಮಾನವನ್ನು ನೀಡಲಿವೆ, ಸಂಸ್ಕೃತ ಮತ್ತು ಸಂಬಂಧಿತ ವಿಷಯಗಳಲ್ಲಿ ಶಿಕ್ಷಣಕ್ಕಾಗಿ ಸಲಹೆ ಸೂಚನೆಗಳನ್ನು ಒದಗಿಸಲಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.