ನವದೆಹಲಿ : ದೇಶದ ಅಭಿವೃದ್ಧಿಗೆ ಶಾಂತಿ, ಸೌಹಾರ್ದತೆ ಮತ್ತು ಐಕ್ಯತೆ ಅತ್ಯಂತ ಅವಶ್ಯಕ ಎಂದು ಪ್ರತಿಪಾದಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಸಮಾಜದಲ್ಲಿ ಸೌಹಾರ್ದತೆಯನ್ನು ಖಚಿತಪಡಿಸಿಕೊಳ್ಳಲು ಮುಂದಾಗಬೇಕೆಂದು ಬಿಜೆಪಿ ಸಂಸದರಿಗೆ ಕರೆ ನೀಡಿದರು.
ಬಿಜೆಪಿ ಸಂಸದೀಯ ಪಕ್ಷದ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿಯವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ವಿರುದ್ಧ ಪರೋಕ್ಷ ಟೀಕೆಯನ್ನು ವ್ಯಕ್ತಪಡಿಸಿದರು ಮತ್ತು ‘ಭಾರತ್ ಮಾತಾ ಕಿ ಜೈ’ ಘೋಷಣೆಯನ್ನು ವಿವಾದಗೊಳಿಸುವ ಪ್ರಯತ್ನಗಳನ್ನು ನಡೆಸಲಾಯಿತು ಎಂದು ಆರೋಪಿಸಿದರು.
”ಸ್ವಾತಂತ್ರ್ಯ ಸಂಗ್ರಾಮದ ನಂತರ ‘ವಂದೇ ಮಾತರಂ’ ಅನ್ನು ಹೇಗೆ ವಿವಾದಕ್ಕೆ ಗುರಿಪಡಿಸುವ ಪ್ರಯತ್ನ ನಡೆಯಿತೋ ಅದೇ ಮಾದರಿಯಲ್ಲಿ ‘ಭಾರತ್ ಮಾತಾ ಕೀ ಜೈ’ ಅನ್ನು ವಿವಾದಿತಗೊಳಿಸಲು ಪ್ರಯತ್ನಿಸಲಾಯಿತು. ಕೆಲವರು “ಭಾರತ್ ಮಾತಾ ಕಿ ಜೈ’ ಘೋಷಣೆಯಲ್ಲೂ ಕೆಟ್ಟದ್ದನ್ನು ಕಾಣುತ್ತಿದ್ದಾರೆ” ಎಂದು ಮೋದಿ ಸಭೆಯಲ್ಲಿ ಸಂಸದರಿಗೆ ತಿಳಿಸಿದ್ದಾರೆ.
”ಬಿಜೆಪಿಗೆ ರಾಷ್ಟ್ರೀಯ ಹಿತಾಸಕ್ತಿ ಅತ್ಯುನ್ನತವಾದುದು, ಅಭಿವೃದ್ಧಿ ನಮ್ಮ ಮಂತ್ರ. ಶಾಂತಿ, ಸಾಮರಸ್ಯ ಮತ್ತು ಐಕ್ಯತೆಯು ದೇಶದ ಅಭಿವೃದ್ಧಿಗೆ ಅವಶ್ಯಕ” ಎಂದು ಅವರು ಸಂಸದರಿಗೆ ತಿಳಿಸಿದರು.
‘ಭಾರತ್ ಮಾತಾ ಕಿ ಜೈ’ ಯನ್ನು ಮನಸ್ಸಿನಲ್ಲಿಟ್ಟುಕೊಂಡು ದೇಶದ ಅಭಿವೃದ್ಧಿಗೆ ಶ್ರಮಿಸಬೇಕು, ಅದು ಸರ್ವೋಚ್ಛವಾಗಿದೆ ಎಂದು ಅವರು ಹೇಳಿದರು.
ಸಭೆಯಲ್ಲಿ, ಸಬ್ಸಿಡಿ ದರದಲ್ಲಿ ಔಷಧಿಗಳನ್ನು ಮಾರಾಟ ಮಾಡುವ ಜನ ಔಷಧಿ ಕೇಂದ್ರದ ಪ್ರಯೋಜನಗಳನ್ನು ಮೋದಿ ಎತ್ತಿ ತೋರಿಸಿದರು ಮತ್ತು ಮಾರ್ಚ್ 7 ರಂದು ಫಲಾನುಭವಿಗಳೊಂದಿಗೆ ಸಂವಹನ ನಡೆಸುವುದಾಗಿ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.