ನವದೆಹಲಿ: ಪುಲ್ವಾಮ ಭಯೋತ್ಪಾದನಾ ದಾಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯು ಮಹತ್ವದ ಪ್ರಗತಿಯನ್ನು ಸಾಧಿಸಿದೆ. ನಾಲ್ಕು ದಿನಗಳ ಹಿಂದೆಯಷ್ಟೇ ಆತ್ಮಾಹುತಿ ಬಾಂಬರ್ ಆದಿಲ್ ಅಹ್ಮದ್ ದಾರ್ಗೆ ಆಶ್ರಯ ನೀಡಿದ್ದ ವ್ಯಕ್ತಿಯನ್ನು ಬಂಧಿಸಿದ್ದ ಎನ್ಐಎ, ಮಾರ್ಚ್ 3ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದೆ.
ಈ ಬಗ್ಗೆ ಮಾಹಿತಿಯನ್ನು ನೀಡಿರುವ ಎನ್ಐಎ ಮೂಲಗಳು, “ಪುಲ್ವಾಮಾ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಇನ್ನೂ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ದಾಳಿಯಲ್ಲಿ ಭಾಗಿಯಾಗಿದ್ದ ತಂದೆ-ಮಗಳನ್ನು ಲೆಥ್ಪೊರಾ ಪ್ರದೇಶದಿಂದ ಬಂಧಿಸಲಾಗಿದೆ” ಎಂದು ತಿಳಿಸಿವೆ.
ಇಬ್ಬರು ಆರೋಪಿಗಳ ಬಂಧನದೊಂದಿಗೆ ಪುಲ್ವಾಮ ದಾಳಿ ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ ಮೂರಕ್ಕೆ ಏರಿದೆ. ಫೆಬ್ರವರಿ 28 ರಂದು ಭಯೋತ್ಪಾದನಾ ವಿರೋಧಿ ತನಿಖಾ ಸಂಸ್ಥೆ ಬಂಧಿಸಿರುವ ಶಕೀರ್ ಬಶೀರ್ ಮ್ಯಾಗ್ರೆ ನೀಡಿದ ಮಾಹಿತಿಗಳ ಆಧಾರದ ಮೇರೆಗೆ ಈ ಬಂಧನಗಳನ್ನು ಮಾಡಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಕಾಕಪೊರಾದ ಹಾಜಿಬಲ್ ನಿವಾಸಿ ಮ್ಯಾಗ್ರೆ, ಪಾಕಿಸ್ಥಾನ ಮೂಲದ ಜೈಶ್-ಎ-ಮೊಹಮ್ಮದ್ (ಜೆಎಂ) ಭಯೋತ್ಪಾದಕ ಗುಂಪಿನ ಓವರ್ ಗ್ರೌಂಡ್ ವರ್ಕರ್ ಆಗಿದ್ದ.
ಏಜೆನ್ಸಿಯ ಮೂಲಗಳ ಪ್ರಕಾರ, ಪುಲ್ವಾಮಾದ ಆತ್ಮಾಹುತಿ ಬಾಂಬರ್ಗೆ ಮ್ಯಾಗ್ರೆ ಆಶ್ರಯ ಮತ್ತು ಇತರ ನೆರವುಗಳನ್ನು ನೀಡಿದ್ದ. ಈತನನ್ನು ಜಮ್ಮು ಮತ್ತು ಕಾಶ್ಮೀರದ ವಿಶೇಷ ಎನ್ಐಎ ನ್ಯಾಯಾಲಯವು 15 ದಿನಗಳ ಕಾಲ ಎನ್ಐಎ ಕಸ್ಟಡಿಗೆ ನೀಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.