ಭೋಪಾಲ್: ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರದಲ್ಲಿ ಮಹಾ ಬಿರುಕು ಮೂಡಿದೆ. 15 ತಿಂಗಳು ಹಳೆಯ ಕಮಲ್ ನಾಥ್ ನೇತೃತ್ವದ ಸರ್ಕಾರ ಪತನವಾಗುವ ಭೀತಿಯಲ್ಲಿದೆ. ಕಾಂಗ್ರೆಸ್ ಪಕ್ಷದ 12 ಮಂದಿ ಶಾಸಕರು ರೆಸಾರ್ಟ್ಗೆ ಶಿಫ್ಟ್ ಆಗಿದ್ದು ತಮ್ಮ ಸರ್ಕಾರವನ್ನು ಬೀಳಿಸಲು ಸಕಲ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ.
ಹರಿಯಾಣದ ಗುರುಗ್ರಾಮ್ ರೆಸಾರ್ಟ್ನಲ್ಲಿ ಕೆಲವು ಶಾಸಕರು ತಂಗಿದ್ದರೆ, ಇನ್ನು ಕೆಲವು ಶಾಸಕರು ಕರ್ನಾಟಕದ ಚಿಕ್ಕಮಗಳೂರಿನ ರೆಸಾರ್ಟ್ನಲ್ಲಿ ಇದ್ದಾರೆ ಎನ್ನಲಾಗಿದೆ. ತನ್ನ ಶಾಸಕರನ್ನು ವಾಪಾಸ್ ಕರೆತರಲು ಕಾಂಗ್ರೆಸ್ ಶತಪ್ರಯತ್ನಗಳನ್ನು ನಡೆಸುತ್ತಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಮೂಲಗಳು, “ಪರಿಸ್ಥಿತಿಗಳು ನಮ್ಮ ನಿಯಂತ್ರಣದಲ್ಲಿದೆ. ಆದರೆ ಬಿಜೆಪಿ ನಮ್ಮನ್ನು ಒಡೆಯಲು ಪ್ರಯತ್ನಿಸುತ್ತಿದೆ” ಎಂದಿದೆ.
ಆದರೆ ಕಾಂಗ್ರೆಸ್ ಆರೋಪಗಳನ್ನು ಬಿಜೆಪಿ ತಳ್ಳಿ ಹಾಕಿದ್ದು, ಮಧ್ಯಪ್ರದೇಶ ಸರ್ಕಾರದಲ್ಲಿನ ಬೆಳವಣಿಗೆಯಲ್ಲಿ ತನ್ನ ಪಾತ್ರ ಇಲ್ಲ ಎಂದು ಹೇಳಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಗೋಪಾಲ್ ಭಾರ್ಗವ ಅವರು, “ನಮಗೂ ಕಾಂಗ್ರೆಸ್ ಸರ್ಕಾರದಲ್ಲಿನ ಬೆಳವಣಿಗೆಗೂ ಯಾವುದೇ ಸಂಬಂಧ ಇಲ್ಲ” ಎಂದಿದ್ದಾರೆ.
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತವಿಲ್ಲ, ಆದರೆ ಇತರ ಪಕ್ಷಗಳ ಬೆಂಬಲವನ್ನು ಪಡೆದುಕೊಂಡು ಅದು ಸರ್ಕಾರವನ್ನು ರಚನೆ ಮಾಡಿತ್ತು. ಸರ್ಕಾರ ರಚನೆಯಾದ ಆರಂಭದಿಂದಲೂ ಅದು ಅಸ್ಥಿರತೆಯೊಂದಿಗೆ ಸಾಗುತ್ತಾ ಬಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.