ಧಾಕಾ : ಮುಜೀಬ್ ಶತಮಾನೋತ್ಸವ ಆಚರಣೆಗಳಲ್ಲಿ ಪಾಲ್ಗೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಶೀಘ್ರದಲ್ಲೇ ಬಾಂಗ್ಲಾದೇಶಕ್ಕೆ ತೆರಳಲಿದ್ದಾರೆ. ಈ ವೇಳೆ ಮೋದಿಯವರನ್ನು ಅತ್ಯುನ್ನತ ಗೌರವದ ಮೂಲಕ ಪುರಸ್ಕರಿಸಲಾಗುವುದು ಎಂದು ಬಾಂಗ್ಲಾದೇಶದ ವಿದೇಶಾಂಗ ಸಚಿವ ಡಾ. ಎ. ಕೆ. ಅಬ್ದುಲ್ ಮೊಮೆನ್ ಹೇಳಿದ್ದಾರೆ.
ಸಿಲ್ಹೆಟ್ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಾ. ಮೊಮೆನ್, ”ನಮ್ಮ ಸರ್ಕಾರವು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿದೆ. ಭಾರತ ಬಾಂಗ್ಲಾ ವಿಮೋಚನಾ ಯುದ್ಧದ ಸಮಯದಲ್ಲಿ ನಮ್ಮ ಹತ್ತಿರದ ಮಿತ್ರ ರಾಷ್ಟ್ರವಾಗಿತ್ತು” ಎಂದಿದ್ದಾರೆ.
ದೆಹಲಿ ಗಲಭೆ ಕುರಿತು ಬಾಂಗ್ಲಾದೇಶದಲ್ಲಿ ನಡೆದ ಕೆಲವು ಪ್ರತಿಭಟನೆಗಳ ಬಗ್ಗೆ ಮಾತನಾಡಿದ ಡಾ. ಮೊಮೆನ್, ”ಪ್ರಜಾಪ್ರಭುತ್ವ ರಾಷ್ಟ್ರಗಳ ಜನರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವ ಹಕ್ಕನ್ನು ಹೊಂದಿದ್ದಾರೆ. ಬಾಂಗ್ಲಾದೇಶದ ಸಾಮಾನ್ಯ ಜನರು ಕೂಡ ಭಾರತದ ಪ್ರಧಾನ ಮಂತ್ರಿಗೆ ಗೌರವ ತೋರಿಸುತ್ತಾರೆ” ಎಂದಿದ್ದಾರೆ.
ಪ್ರಧಾನಿ ಮೋದಿಯವರ ಭೇಟಿಯನ್ನು ವಿರೋಧಿಸಿರುವ ತಮ್ಮ ಪ್ರತಿಪಕ್ಷ ಬಾಂಗ್ಲಾದೇಶ ನ್ಯಾಷನಲಿಷ್ಟ್ ಪಾರ್ಟಿಯ ಧೋರಣೆಯ ಬಗ್ಗೆ ಮಾತನಾಡಿದ ಅವರು, ಆ ಪಕ್ಷದ ದೇಶದಲ್ಲಿ ಕೋಮು ಅಸಮಾನತೆಯನ್ನು ಪ್ರಚೋದಿಸುವ ಉದ್ದೇಶವನ್ನು ಇಟ್ಟುಕೊಂಡಿದೆ ಎಂದು ಹೇಳಿದರು.
“ಭಾರತದಲ್ಲಿ ನಡೆಯುತ್ತಿರುವುದು ಅದರ ಆಂತರಿಕ ವಿಷಯವಾಗಿದೆ. ಭಾರತದ ಭಾಗವಹಿಸುವಿಕೆ ಇಲ್ಲದೆ ಮುಜೀಬ್ ಶತಮಾನೋತ್ಸವ ಆಚರಣೆಯು ಅಪೂರ್ಣವಾಗಲಿದೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.