ಬೆಂಗಳೂರು: ಕರ್ನಾಟಕದಲ್ಲಿ ಕೊರೋನವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇತ್ತೀಚಿಗಷ್ಟೇ ಬೆಂಗಳೂರಿನಲ್ಲಿ ನೆಲೆಸಿದ್ದ ಟೆಕ್ಕಿ ಒಬ್ಬರಿಗೆ ಕೊರೋನವೈರಸ್ ಇರುವುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಭಾರೀ ಮುನ್ನೆಚ್ಚರಿಕೆ ಕ್ರಮಗಳನ್ನು ರಾಜ್ಯದಲ್ಲಿ ಕೈಗೊಳ್ಳಲಾಗುತ್ತಿದೆ.
ಆದರೆ ಕೆಲವೊಬ್ಬರು ಸಾಮಾಜಿಕ ಜಾಲತಾಣ ಸೇರಿದಂತೆ ಹಲವು ಕಡೆ ವಿನಾಕಾರಣ ಕೊರೋನವೈರಸ್ ಬಗ್ಗೆ ಅಪಪ್ರಚಾರಗಳನ್ನು ಮಾಡಿ ಜನರಲ್ಲಿ ಆತಂಕವನ್ನು ಮೂಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಠಿಣ ಸಂದೇಶವನ್ನು ರವಾನಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವದಂತಿಗಳನ್ನು ಹಬ್ಬಿಸಿದರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನು ರವಾನಿಸಿದೆ.
ಕೊರೋನವೈರಸ್ ಕುರಿತು ಸುಳ್ಳು ಮಾಹಿತಿ ಹಬ್ಬಿಸುತ್ತಿರುವವರ ವಿರುದ್ಧ ಕೇರಳ ಮತ್ತು ತೆಲಂಗಾಣದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಸುತ್ತಿದ್ದಾರೆ. ಅದೇ ರೀತಿ ರಾಜ್ಯದಲ್ಲೂ ಕೂಡ ವದಂತಿಗಳನ್ನು ಹಬ್ಬಿಸಿದರೆ ಕ್ರಮಕೈಗೊಳ್ಳಲಾಗುವುದು ಎಂದು ಇಲಾಖೆ ಆಯುಕ್ತ ಕುಮಾರ್ ಪಾಂಡೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇದ್ದ ಹೈದರಾಬಾದ್ ಟೆಕ್ಕಿಯೊಬ್ಬರಿಗೆ ವೈರಸ್ ಪತ್ತೆಯಾಗಿರುವುದು ಬಿಟ್ಟರೆ ರಾಜ್ಯದಲ್ಲಿ ಇತರ ಯಾವುದೇ ಕೊರೋನವೈರಸ್ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಆದರೂ ಮುನ್ನೆಚ್ಚರಿಕೆಯಾಗಿ ಹತ್ತು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.