ಕಾರವಾರ: ಶೀಘ್ರದಲ್ಲೇ ಉತ್ತರಕನ್ನಡ ಜಿಲ್ಲೆಯ ಬಂದರು ನಗರಿ ಕಾರವಾರದಲ್ಲಿ ಬಹುನಿರೀಕ್ಷಿತ ಏರ್ಕ್ರಾಫ್ಟ್ ಮ್ಯೂಸಿಯಂ ರಚನೆಯಾಗಲಿದೆ. ಟುಪೋಲೆವ್ TU 142M ಏರ್ಕ್ರಾಫ್ಟ್ ಅನ್ನು ಹಸ್ತಾಂತರಿಸುವ ಬಗ್ಗೆ ಕರ್ನಾಟಕ ಸರ್ಕಾರ ಮತ್ತು ಭಾರತೀಯ ನೌಕಾಪಡೆ ತಿಳಿವಳಿಕೆಯ ಒಪ್ಪಂದಕ್ಕೆ ಸಹಿ ಹಾಕಿದ್ದು ಶೀಘ್ರದಲ್ಲೇ ಮ್ಯೂಸಿಯಂ ತಲೆ ಎತ್ತಲಿದೆ.
TU 142M ಭಾರತೀಯ ನೌಕಾಪಡೆಯ ದೀರ್ಘ-ಶ್ರೇಣಿಯ ಕಡಲ ಗಸ್ತು ವಿಮಾನವಾಗಿತ್ತು. ಇದು 2017 ರಲ್ಲಿ ನಿವೃತ್ತಿಯಾಗುವವರೆಗೂ ವಿವಿಧ ಕಾರ್ಯಾಚರಣೆಗಳಲ್ಲಿ ಪ್ರಮುಖ ಪಾತ್ರ ವಹಿಸಿದೆ.
ಕರ್ನಾಟಕ ಸರ್ಕಾರವು ಇದನ್ನು ವಾಯುಯಾನ ವಸ್ತುಸಂಗ್ರಹಾಲಯವನ್ನಾಗಿ ಪರಿವರ್ತಿಸಲು ಬಯಸಿತ್ತು. ಇದನ್ನು ಚಾಪಲ್ ಯುದ್ಧನೌಕೆ ವಸ್ತುಸಂಗ್ರಹಾಲಯದ ಪಕ್ಕದಲ್ಲಿ ಇರಿಸಿ ಆ ಮೂಲಕ ಅದನ್ನು ಕಾರವಾರದಲ್ಲಿ ಪ್ರವಾಸಿ ಆಕರ್ಷಣೆಯಾಗಿಸುವುದು ಸರ್ಕಾರದ ಯೋಜನೆಯಾಗಿದೆ.
ಕರ್ನಾಟಕ ಸರ್ಕಾರ ರಕ್ಷಣಾ ಸಚಿವರಿಗೆ ಪತ್ರ ಬರೆದ ನಂತರ ಈ ಪ್ರಸ್ತಾಪಕ್ಕೆ ರಕ್ಷಣಾ ಸಚಿವಾಲಯ ಒಪ್ಪಿಕೊಂಡಿತ್ತು. ಈ ವಿಮಾನ ಸುಮಾರು ಎರಡು ವರ್ಷಗಳಿಂದ ಸೇವೆಯಲ್ಲಿಲ್ಲ.
ಉತ್ತರ ಕನ್ನಡ ಉಪ ಆಯುಕ್ತ ಕೆ.ಹರೀಶ್ ಕುಮಾರ್ ಮತ್ತು ಕರ್ನಾಟಕ ನೌಕಾ ಪ್ರದೇಶದ (ಎಫ್ಒಕೆ) ಕಮಾಂಡಿಂಗ್ ಅಧಿಕಾರಿ ರಿಯರ್ ಅಡ್ಮಿರಲ್ ಮಹೇಶ್ ಸಿಂಗ್ ಅವರು ಉಪಕ್ರಮವನ್ನು ಕೈಗೆತ್ತಿಕೊಂಡ ಹಿನ್ನಲೆಯಲ್ಲಿ ಈಗ ಯೋಜನೆಯು ವೇಗವನ್ನು ಪಡೆದುಕೊಂಡಿದೆ.
ಒಪ್ಪಂದಕ್ಕೆ ಸಹಿ ಹಾಕಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಚಾಪಲ್ ಯುದ್ಧ ನೌಕೆ ವಸ್ತುಸಂಗ್ರಹಾಲಯದ ಪಕ್ಕದ ರವೀಂದ್ರನಾಥ ಟ್ಯಾಗೋರ್ ಬೀಚ್ನಲ್ಲಿ ಟುಪೋಲೆವ್ ವಿಮಾನವು ಮ್ಯೂಸಿಯಂ ಆಗಿ ಹೊರಹೊಮ್ಮಲಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.