ಜೆರುಸಲೇಂ : ಕೊರೋನವೈರಸ್ ಮಹಾಮಾರಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ಭಾರತೀಯ ಪದ್ಧತಿಯಾದ ‘ನಮಸ್ತೆ’ಯನ್ನು ಅಳವಡಿಸಿಕೊಳ್ಳಿ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ದೇಶವಾಸಿಗಳಿಗೆ ಕರೆ ನೀಡಿದ್ದಾರೆ. ಇದರಿಂದ ವೈರಸ್ ಹರಡುವುದನ್ನು ತಪ್ಪಿಸಿಕೊಳ್ಳಬಹುದು ಎಂಬುದಾಗಿ ಅವರು ಅಭಿಪ್ರಾಯಿಸಿದ್ದಾರೆ.
ಕೊರೋನವೈರಸ್ಗೆ ಸಂಬಂಧಿಸಿದಂತೆ ಪರಿಶೀಲನಾ ಸಭೆಯನ್ನು ನಡೆಸಿದ ಬಳಿಕ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬೆಂಜಮಿನ್ ಅವರು, “ಕೊರೋನವೈರಸ್ ಹರಡುವುದನ್ನು ತಡೆಗಟ್ಟಲು ಹಲವಾರು ಕ್ರಮಗಳನ್ನು ಘೋಷಿಸಲಾಗುವುದು ಆದರೆ ಜನರನ್ನು ಸ್ವಾಗತಿಸುವಾಗ ಸಾಮಾನ್ಯ ಹಸ್ತಲಾಘವ, ಆಲಿಂಗನಗಳ ಬದಲು ಭಾರತೀಯ ‘ನಮಸ್ತೆ’ಯನ್ನು ಅಳವಡಿಸಿಕೊಳ್ಳುವಂತಹ ಸರಳ ವಿಧಾನಗಳನ್ನು ಪಾಲಿಸುವುದು ಉತ್ತಮ” ಎಂದಿದ್ದಾರೆ.
ಜನರನ್ನು ಸ್ವಾಗತಿಸುವ ವೇಳೆ ಭಾರತೀಯರು ‘ನಮಸ್ತೆ’ಯನ್ನು ಹೇಗೆ ಮಾಡುತ್ತಾರೆ ಎಂಬುದನ್ನು ಕೂಡ ಬೆಂಜಮಿನ್ ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರದರ್ಶಿಸಿದ್ದಾರೆ.
“ನಾವು ಜಾಗತಿಕ ಸಾಂಕ್ರಾಮಿಕತೆಯ ಮಧ್ಯದಲ್ಲಿದ್ದೇವೆ” ಎಂದು ನೆತನ್ಯಾಹು ಹೇಳಿದ್ದಾರೆ, ಆದರೆ ದೇಶದಲ್ಲಿ ವೈರಸ್ ಹರಡುವುದನ್ನು ತಡೆಯಲು ತ್ವರಿತ ಕ್ರಮಗಳನ್ನು ಕೈಗೊಂಡಿದ್ದರಿಂದ ಇಸ್ರೇಲ್ ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ.
“ಇಸ್ರೇಲಿನಲ್ಲಿ ವೈರಸ್ ಹರಡುವಿಕೆಯನ್ನು ತಡೆಯಲು ನಾವು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ವಿಮಾನ ನೀತಿಗಳು ಮತ್ತು ವಿಮಾನಗಳ ಕ್ರಮಗಳನ್ನೂ ನಾವು ತೆಗೆದುಕೊಂಡಿದ್ದೇವೆ” ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.