ಅಯೋಧ್ಯೆ: ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರವನ್ನು ನಿರ್ಮಾಣ ಮಾಡುವ ಮೇಲ್ವಿಚಾರಣೆಯನ್ನು ವಹಿಸಿರುವ ಟ್ರಸ್ಟ್, ದೇವರ ವಿಗ್ರಹವನ್ನು ತಾತ್ಕಾಲಿಕ ಟೆಂಟ್ನಿಂದ ಸ್ಥಳಾಂತರ ಮಾಡುವ ಪ್ರಕ್ರಿಯೆಯನ್ನು ಆರಂಭಿಸಿದೆ. ಕಳೆದ ಮೂರು ದಶಕಗಳಿಂದ ವಿಗ್ರಹವನ್ನು ತಾತ್ಕಾಲಿಕ ಟೆಂಟ್ನಲ್ಲಿ ಇಡಲಾಗಿತ್ತು. ಪ್ರಸ್ತುತ ಅದನ್ನು ಟೆಂಟ್ ನಿಂದ 200 ಮೀಟರ್ ದೂರದಲ್ಲಿರುವ ಫೈಬರ್ ಅಥವಾ ಮರದಿಂದ ಮಾಡಿದ ಆವರಣಕ್ಕೆ ಸ್ಥಳಾಂತರಿಸುವ ಕೆಲಸವನ್ನು ಪ್ರಾರಂಭಿಸಲಾಗಿದೆ.
“15 ದಿನಗಳ ರಾಮ ಮಹೋತ್ಸವ ಪ್ರಾರಂಭವಾಗಲಿರುವ ಮಾರ್ಚ್ 25 ರ ಮೊದಲು ರಾಮಲಲ್ಲಾ ವಿಗ್ರಹ ಸ್ಥಳಾಂತರದ ಕಾರ್ಯ ಪೂರ್ಣಗೊಳ್ಳಲಿದೆ” ಎಂದು ವಿಶ್ವ ಹಿಂದೂ ಪರಿಷತ್ ರಾಷ್ಟ್ರೀಯ ವಕ್ತಾರ ವಿನೋದ್ ಬನ್ಸಾಲ್ ಹೇಳಿದ್ದಾರೆ.
ವಿಗ್ರಹ ಸ್ಥಳಾಂತರದಿಂದ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಪ್ರವೇಶದ್ವಾರದಿಂದ ವಿಗ್ರಹದ ಬಳಿಗೆ ತೆರಳುವ ದೂರ 500 ಮೀಟರ್ಗಳಷ್ಟು ಕಡಿಮೆಯಾಗಲಿದೆ. ಅಲ್ಲದೇ, ಭಕ್ತಾದಿಗಳಿಗೆ ವಿಗ್ರಹ ಸ್ಪಷ್ಟವಾಗಿ ಗೋಚರಿಸುವಂತೆ ಬೆಳಕಿನ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಬನ್ಸಾಲ್ ಹೇಳಿದ್ದಾರೆ.
2.77 ಎಕರೆ ವಿವಾದಿತ ಭೂಮಿಯಲ್ಲಿ ರಾಮ ಮಂದಿರವನ್ನು ನಿರ್ಮಾಣ ಮಾಡುವಂತೆ ಮತ್ತು ಪರ್ಯಾಯ 5 ಎಕರೆ ಪ್ರದೇಶವನ್ನು ಮಸೀದಿ ನಿರ್ಮಾಣಕ್ಕೆ ನೀಡುವಂತೆ ಎಂದು ಸುಪ್ರೀಂ ಕೋರ್ಟ್ ನವೆಂಬರ್ ತಿಂಗಳಿನಲ್ಲಿ ನೀಡಿದ ತೀರ್ಪಿನ ಅನುಸಾರ ದೇವಾಲಯ ನಿರ್ಮಾಣದ ಮೇಲ್ವಿಚಾರಣೆಗೆ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ರಚನೆಯನ್ನು ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿಯಲ್ಲಿ ಘೋಷಿಸಿದ್ದರು. ಅದು ಶ್ರೀ ರಾಮ ಮಂದಿರ ನಿರ್ಮಾಣದ ಸಂಪೂರ್ಣ ಹೊಣೆಯನ್ನು ಹೊರಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.