ಮುಂಬಯಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಹಾರಾಷ್ಟ್ರ ಜಿಲ್ಲೆಯೊಂದು ತನ್ನ ಶಾಲೆಯ ಬಾಲಕಿಯರಿಗೆ ‘ಒಂದು ದಿನ ಜಿಲ್ಲಾಧಿಕಾರಿ’ಗಳಾಗಿ ಕಾರ್ಯನಿರ್ವಹಿಸಲು ಅವಕಾಶವನ್ನು ಮಾಡಿಕೊಟ್ಟಿದೆ.
ಹೆಣ್ಣು ಮಕ್ಕಳ ಆತ್ಮವಿಶ್ವಾಸವನ್ನು ಹೆಚ್ಚಿಸಲು ಮತ್ತು ಅವರಿಗೆ ಅತ್ಯುತ್ತಮವಾಗಿ ಕಾರ್ಯ ಮಾಡಲು ಪ್ರೇರೇಪಿಸುವ ಉದ್ದೇಶದಿಂದ ಈ ಉಪಕ್ರಮವನ್ನು ಬುಲ್ಧಾನ ಜಿಲ್ಲಾಡಳಿತ ಕೈಗೆತ್ತಿಕೊಂಡಿದೆ.
ಆಡಳಿತದ ಕಾರ್ಯವೈಖರಿ ಮತ್ತು ಅದು ಸಾಮಾಜಿಕ ಮತ್ತು ಇತರ ಸಮಸ್ಯೆಗಳನ್ನು ಹೇಗೆ ನಿಭಾಯಿಸುತ್ತದೆ ಎಂಬುದರ ಬಗ್ಗೆ ಬಾಲಕಿಯರಿಗೆ ಅರಿವು ಮೂಡಿಸುವ ಉದ್ದೇಶ ಕೂಡ ಈ ಉಪಕ್ರಮದ ಹಿಂದೆ ಇದೆ ಎಂದು ಬುಲ್ಧಾನ ಕಲೆಕ್ಟರ್ ಸುಮನ್ ಚಂದ್ರ ಹೇಳಿದ್ದಾರೆ.
“ಉಪಕ್ರಮದ ಭಾಗವಾಗಿ, ಜಿಲ್ಲಾ ಪರಿಷತ್ ಶಾಲೆಗಳ ಜಾಣ ಮತ್ತು ಅರ್ಹ ಬಾಲಕಿಯರಿಗೆ ಒಂದು ದಿನ ಜಿಲ್ಲಾಧಿಕಾರಿಯಾಗಲು ಮತ್ತು ಆಡಳಿತದ ಮೊದಲ ಅನುಭವವನ್ನು ಹೊಂದಲು ಅವಕಾಶ ಸಿಗಲಿದೆ. ಜಿಲ್ಲಾಧಿಕಾರಿಯ ಕುರ್ಚಿಯ ಮೇಲೆ ಕುಳಿತುಕೊಳ್ಳುವ ವಿಭಿನ್ನ ಅನುಭವ ಅವರಿಗೆ ಸಿಗಲಿದೆ” ಎಂದಿದ್ದಾರೆ.
ಇಂತಹ ಅವಕಾಶವನ್ನು ನೀಡುವುದರಿಂದ ಸಮಾಜದಲ್ಲಿ ಯಾವ ಬದಲಾವಣೆಗಳನ್ನು ತರಲು ಅವರು ಬಯಸುತ್ತಾರೆ ಎಂಬುದನ್ನು ನಿರ್ಧರಿಸಲು ಹೆಣ್ಣುಮಕ್ಕಳಿಗೆ ಅವಕಾಶ ನೀಡಿದಂತಾಗುತ್ತದೆ ಎಂಬುದು ಸುಮನ್ ಚಂದ್ರ ಅವರ ಅಭಿಪ್ರಾಯವಾಗಿದೆ.
ಬುಧವಾರ, ಮಲ್ಕಾಪುರ ತಾಲ್ಲೂಕಿನ ಜಿಲ್ಲಾ ಪರಿಷತ್ ಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ಮಾರಿಯಾ ಅವರಿಗೆ ಜನಗಣತಿ ಸಭೆಯಲ್ಲಿ ಪಾಲ್ಗೊಳ್ಳಲು ಅವಕಾಶವನ್ನು ಮಾಡಿಕೊಡಲಾಗಿತ್ತು. ಇದರಿಂದ ಆಕೆಗೆ ಜನಗಣತಿಯನ್ನು ಹೇಗೆ ನಡೆಸಲಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.