ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ‘ಕರ್ನಾಟಕ ಬಜೆಟ್ 2020’ ಅನ್ನು ಮಂಡನೆಗೊಳಿಸಿದ್ದಾರೆ. 2,37,893 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡನೆಯಾಗಿದೆ. 2020–21ನೇ ಸಾಲಿನಲ್ಲಿ ಒಟ್ಟು ರೂ. 2,33,134 ಕೋಟಿ ಜಮೆಗಳನ್ನು ನಿರೀಕ್ಷಿಸಲಾಗಿದೆ. ಅಂತೆಯೇ 2,37,893 ಕೋಟಿ ವೆಚ್ಚವನ್ನು ಅಂದಾಜಿಸಲಾಗಿದ್ದು, ಆದಾಯಕ್ಕೂ ವೆಚ್ಚಕ್ಕೂ ರೂ.4759 ಕೋಟಿ ಅಂತರವಿದೆ.
ಶಿಕ್ಷಣ ಇಲಾಖೆಗೆ ಬಜೆಟ್ನಲ್ಲಿ ರೂ. 29,768 ಕೋಟಿ ಒದಗಿಸಲಾಗಿದೆ. ನಗರಾಭಿವೃದ್ಧಿ ಇಲಾಖೆಗೆ ರೂ.27,952 ಕೋಟಿ ಒದಗಿಸಲಿದೆ. ಜಲಸಂಪನ್ಮೂಲ ಇಲಾಖೆ ರೂ.21,308 ಕೋಟಿ, ಇಂಧನ ಇಲಾಖೆಗೆ ರೂ. 17, 290 ಕೋಟಿ , ಗ್ರಾಮೀಣಾಭಿವೃದ್ಧಿ ಇಲಾಖೆಗೆ ರೂ.15.595 ಕೋಟಿಗಳನ್ನು ನೀಡಲಾಗಿದೆ.
ಕಂದಾಯ ಇಲಾಖೆಗೆ ರೂ. 11, 860 ಕೋಟಿ , ಲೋಕೋಪಯೋಗಿ ಇಲಾಖೆಗೆ ರೂ.11, 463 ಕೋಟಿ , ಆರೋಗ್ಯ ಇಲಾಖೆಗೆ ರೂ.10, 122 ಕೋಟಿ, ಸಾರಿಗೆ, ಒಳಾಡಳಿತ ಇಲಾಖೆಗೆ ರೂ.10, 108 ಕೋಟಿ, ಸಮಾಜ ಕಲ್ಯಾಣ ಇಲಾಖೆಗೆ ರೂ. 9,444 ಕೋಟಿ, ಕೃಷಿ & ತೋಟಗಾರಿಕೆ ಇಲಾಖೆಗೆ ರೂ. 7,889 ಕೋಟಿ, ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ರೂ.4,650 ಕೋಟಿ, ವಸತಿ ಇಲಾಖೆಗೆ ರೂ. 2,971 ಕೋಟಿ, ಆಹಾರ ಇಲಾಖೆ ರೂ. 2,668 ಕೋಟಿ, ಇತರೆ ಇಲಾಖೆಗೆ ರೂ. 84,023 ಕೋಟಿಗಳನ್ನು ಒದಗಿಸಲಾಗಿದೆ.
ಆಧುನಿಕ ಮೀನುಗಾರಿಕೆ ತಾಂತ್ರಿಕತೆ ಅಳವಡಿಕೆ ಉತ್ತೇಜನಕ್ಕೆ 1.5 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಮತ್ಸ್ಯ ವಿಕಾಸ ಯೋಜನೆ ಜಾರಿಯನ್ನು ಘೋಷಿಸಲಾಗಿದೆ. ಮಹಿಳಾ ಮೀನುಗಾರರ ಸಬಲೀಕರಣ ಯೋಜನೆಯಡಿ 1000 ಮೀನುಗಾರ ಮಹಿಳೆಯರಿಗೆ ದ್ವಿಚಕ್ರ ವಾಹನಗಳನ್ನು ನೀಡಲು 5 ಕೋಟಿ ರೂ. ಅನುದಾನ ಘೋಷಣೆಯಾಗಿದೆ. ಮುಲ್ಕಿಯಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಹಿನ್ನೀರು ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆ ಘೋಷಣೆಯಾಗಿದೆ.
ಮಂಗಳೂರು ತಾಲ್ಲೂಕು ಕುಳಾಯಿಯಲ್ಲಿ ನಿರ್ಮಿಸಲಾಗುತ್ತಿರುವ ಹೊಸ ಮೀನುಗಾರಿಕೆ ಬಂದರಿನಲ್ಲಿ ಕೋಟಿ ರೂ ವೆಚ್ಚದಲ್ಲಿ ಆಧುನಿಕ ಕರಾವಳಿ ಮೀನು ರಫ್ತು ಸ್ಥಾವರ ಸ್ಥಾಪನೆಗೆ ನಿರ್ಧಾರ, ಉಡುಪಿ ಜಿಲ್ಲೆಯ ಹೆಜಮಾಡಿ ಕೋಡಿಯಲ್ಲಿ ಪರಿಷ್ಕೃತ ಅಂದಾಜು ವೆಚ್ಚ 181 ಕೋಟಿ ರೂ. ಗಳಲ್ಲಿ ಮೀನುಗಾರಿಕೆ ಬಂದರು ನಿರ್ಮಾಣದ ಘೋಷಣೆಯನ್ನು ಬಜೆಟ್ನಲ್ಲಿ ಘೋಷಿಸಲಾಗಿದೆ.
ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (PCARD), ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (DCC) ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (PACS) ಗಳಿಂದ ನೀಡಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಸುಸ್ತಿ ಸಾಲಗಳ ಮೇಲಿನ ಬಡ್ಡಿ ಮನ್ನಾ. 466 ಕೋಟಿ ರೂ. ನೆರವು. 92 ಸಾವಿರ ರೈತರಿಗೆ ಇದರ ಪ್ರಯೋಜನ ಸಿಗಲಿದೆ.
ಅಡಿಕೆ ಬೆಳೆಗಾರರ ಪ್ರಾಥಮಿಕ/ ಮಾರುಕಟ್ಟೆ ಸಹಕಾರ ಸಂಘಗಳಲ್ಲಿ ಪ್ರತಿ ರೈತ ಕುಟುಂಬಕ್ಕೆ ನೀಡುವ ದೀರ್ಘಾವಧಿ ಕೃಷಿ ಸಾಲದ ಪೈಕಿ ಗರಿಷ್ಠ ಎರಡು ಲಕ್ಷ ರೂ. ವರೆಗಿನ ಸಾಲಕ್ಕೆ ಶೇ. 5 ರಷ್ಟು ಬಡ್ಡಿ ವಿನಾಯಿತಿ ಘೋಷಣೆ ಮಾಡಲಾಗಿದೆ,.
ಕೃಷಿ ಮೌಲ್ಯ ಸರಪಳಿಯ ಅಭಿವೃದ್ಧಿಗಾಗಿ 100 FPO ರಚನೆ, FPO ಗಳ ಮೂಲಕ ಮೌಲ್ಯ ಸರಪಳಿ ಅಭಿವೃದ್ಧಿಗೆ 8 ಕೋಟಿ ರೂ. ನೆರವು ಘೋಷಣೆ.
ಕೃಷಿ ಉತ್ಪನ್ನಗಳ ಬೆಂಬಲ ಬೆಲೆ ಖರೀದಿಗಾಗಿ ಸ್ಥಾಪಿಸಲಾಗಿರುವ ಕನಿಷ್ಠ ಬೆಂಬಲ ಬೆಲೆ ಆವರ್ತ ನಿಧಿಯ ಮೊತ್ತ ಅಗತ್ಯಕ್ಕೆ ಅನುಗುಣವಾಗಿ 2000 ಕೋಟಿ ರೂ. ವರೆಗೆ ಹೆಚ್ಚಳ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.