ನವದೆಹಲಿ: ದೆಹಲಿ ದಂಗೆಯ ಸಂದರ್ಭದಲ್ಲಿ ಇಂಟೆಲಿಜೆನ್ಸ್ ಬ್ಯೂರೋ ಉದ್ಯೋಗಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಆಮ್ ಆದ್ಮಿ ಪಕ್ಷದ ಮುಖಂಡ ತಾಹಿರ್ ಹುಸೇನ್ಗೆ ಬಂಧನವಾಗಿದೆ. ಕೊಲೆ, ಗಲಭೆ ಮತ್ತು ಬೆಂಕಿ ಹಚ್ಚಿದ ಪ್ರಕರಣದಲ್ಲಿ ಆರೋಪಿಯಾಗಿರುವ ಈ ರಾಜಕಾರಣಿ ಇಂದು ದೆಹಲಿ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ. ಈತನ ಶರಣಾಗತಿಯ ಮನವಿಯನ್ನು ನ್ಯಾಯಾಲಯ ನಿರಾಕರಿಸಿದೆ.
ನ್ಯಾಯಾಲಯ ಈತನ ಮನವಿಯನ್ನು ನಿರಾಕರಿಸಿರುವ ಹಿನ್ನಲೆಯಲ್ಲಿ ಪೊಲೀಸರು ಈತನನ್ನು ಕರೆದುಕೊಂಡು ಹೋಗಿದ್ದಾರೆ. ಆದರೆ ಈತನ ಅಧಿಕೃತ ಬಂಧನ ಇನ್ನಷ್ಟೇ ಆಗಬೇಕಿದೆ.
ದೆಹಲಿ ದಂಗೆಯ ಸಂದರ್ಭದಲ್ಲಿ ಜಾಫರಬಾದಿನ ಚರಂಡಿಯಲ್ಲಿ ಅಂಕಿತ್ ಶರ್ಮಾ ಎಂಬ ಇಂಟೆಲಿಜೆನ್ಸ್ ಉದ್ಯೋಗಿಯ ಶವ ಪತ್ತೆಯಾಗಿತ್ತು. ಈ ಕೊಲೆಯಲ್ಲಿ ತಾಹೀರ್ ಹೆಸರು ಕೇಳಿ ಬಂದಿತ್ತು. ಈ ಬಳಿಕ ಆತ ತಲೆಮರೆಸಿಕೊಂಡಿದ್ದ.
ದಂಗೆಯ ಸಂದರ್ಭದಲ್ಲಿ ತಾಹೀರ್ ಮನೆ ಮೇಲಿಂದ ಉದ್ರಿಕ್ತರ ಗುಂಪು ಜನರ ಮೇಲೆ ಕಲ್ಲು ತೂರಾಟವನ್ನು ನಡೆಸಿತ್ತು. ಈತನ ಮನೆಯಲ್ಲಿ ಪೆಟ್ರೋಲ್ ಬಾಂಬ್, ಕಲ್ಲು ಇತ್ಯಾದಿ ದಂಗೆಯಲ್ಲಿ ಬಳಸಲಾದ ವಸ್ತುಗಳು ದೊರೆತಿತ್ತು. ಇವುಗಳು ದಂಗೆಯಲ್ಲಿ ಈತನ ಪಾತ್ರವನ್ನು ಖಚಿತಪಡಿಸಿದ್ದವು.
ತಾಹೀರ್ ಹುಸೇನ್ ಎಎಪಿ ಪಕ್ಷದ ಕಾರ್ಪೋರೇಟರ್ ಆಗಿದ್ದಾನೆ. ದೆಹಲಿ ದಂಗೆಯಲ್ಲಿ ಈತನ ವಿರುದ್ಧ ಆರೋಪ ಬಂದ ಹಿನ್ನಲೆಯಲ್ಲಿ ಈತನನ್ನು ಉಚ್ಛಾಟನೆಗೊಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.