ನವದೆಹಲಿ: ಸಂಸತ್ತಿನಲ್ಲಿ ಅನುಚಿತ ವರ್ತನೆಯನ್ನು ತೋರಿದ ಏಳು ಕಾಂಗ್ರೆಸ್ ಸಂಸದರನ್ನು ಸ್ಪೀಕರ್ ಓಂ ಬಿರ್ಲಾ ಅವರು ಲೋಕಸಭೆಯಿಂದ ಅಮಾನತುಗೊಳಿಸಿದ್ದಾರೆ. ಬಜೆಟ್ ಅಧಿವೇಶನ ಮುಗಿಯುವವರೆಗೂ ಅವರು ಸದನಕ್ಕೆ ಆಗಮಿಸುವಂತಿಲ್ಲ.
ಅಮಾನತುಗೊಂಡ ಏಳು ಕಾಂಗ್ರೆಸ್ ಸಂಸದರೆಂದರೆ – ಗೌರವ್ ಗೊಗೊಯ್, ಟಿ.ಎನ್.ಪ್ರತಾಪನ್, ಡೀನ್ ಕುರಿಯಕೋಸ್, ಆರ್ ಉನ್ನಿತಾನ್, ಮಾಣಿಕಮ್ ಟ್ಯಾಗೋರ್, ಬೆನ್ನಿ ಬೆಹ್ನಾನ್ ಮತ್ತು ಗುರ್ಜೀತ್ ಸಿಂಗ್ ಆಜ್ಲಾ.
ಈ ಎಲ್ಲಾ ಏಳು ಕಾಂಗ್ರೆಸ್ ಸಂಸದರನ್ನು ಲೋಕ ಸ್ಪೀಕರ್ ಅವರು ಪ್ರಸ್ತುತ ನಡೆಯುತ್ತಿರುವ ಉಳಿದ ಬಜೆಟ್ ಅಧಿವೇಶನಕ್ಕೆ ಅಮಾನತುಗೊಳಿಸಿದ್ದಾರೆ. ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷದ ಸದಸ್ಯರು ಸದನದಲ್ಲಿ ಪ್ರತಿಭಟನೆ ಮುಂದುವರಿಸಿದ್ದರಿಂದ ಮತ್ತು ಇತ್ತೀಚೆಗೆ ನಡೆದ ದೆಹಲಿ ಹಿಂಸಾಚಾರದ ಬಗ್ಗೆ ಕೇಂದ್ರದ ವಿರುದ್ಧ ತೀವ್ರ ಘೋಷಣೆಗಳನ್ನು ಎತ್ತಿದ್ದರಿಂದ ಲೋಕಸಭಾ ಸ್ಪೀಕರ್ ಈ ಕ್ರಮ ಕೈಗೊಂಡಿದ್ದಾರೆ.
ಈ ಸಂಬಂಧದ ನಿರ್ಣಯವನ್ನು ಸಂಸತ್ತಿನಲ್ಲಿ ಧ್ವನಿ ಮತದಿಂದ ಅಂಗೀಕರಿಸಲಾಯಿತು. ಅದರ ನಂತರ, ಕೆಳ ಮನೆಯನ್ನು ಶುಕ್ರವಾರ ಮಾರ್ಚ್ 6ಕ್ಕೆ ಮುಂದೂಡಲಾಯಿತು.
ಅಧಿವೇಶನದ ಉಳಿದ ಅವಧಿಗೆ ಪ್ರತಿಪಕ್ಷದ ಏಳು ಅಶಿಸ್ತಿನ ಸದಸ್ಯರನ್ನು ಸದನದಿಂದ ಅಮಾನತುಗೊಳಿಸುವ ನಿರ್ಧಾರವನ್ನು ಆಡಳಿತ ಪಕ್ಷ ಬಿಜೆಪಿ ಸ್ವಾಗತಿಸಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.