ನವದೆಹಲಿ: ಮೊದಲ ಬಾರಿಗೆ ಕರ್ನಾಟಕ ಸರ್ಕಾರ “ಮಕ್ಕಳ ಬಜೆಟ್” ಅನ್ನು ಘೋಷಿಸಿದೆ. ನಿನ್ನೆ ಮಂಡಿಸಲಾದ ‘ಕರ್ನಾಟಕ ಬಜೆಟ್ 2020’ಯಲ್ಲಿ ಮಕ್ಕಳಿಗಾಗಿ ಹಲವಾರು ಕ್ರಮಗಳನ್ನು ಘೋಷಿಸಲಾಗಿದೆ.
ಬಜೆಟ್ ಭಾಷಣವನ್ನು ಪ್ರಸ್ತುತಪಡಿಸಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು, 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲಾ ನೀತಿಗಳು ಮತ್ತು ಕಾರ್ಯಕ್ರಮಗಳನ್ನು ಕ್ರೋಢೀಕರಿಸಿ 279 ಕಾರ್ಯಕ್ರಮಗಳನ್ನು ಮಾಡಲಾಗಿದ್ದು, ಇದಕ್ಕಾಗಿ 36,340 ಕೋಟಿ ರೂಪಾಯಿಗಳನ್ನು ಎತ್ತಿಡಲಾಗಿದೆ ಎಂದಿದ್ದಾರೆ. ಪ್ರತಿ ತಿಂಗಳ ಎರಡು ಶನಿವಾರ ಬ್ಯಾಗ್ ರಹಿತ ದಿನ, ಸಂಭ್ರಮ ಶನಿವಾರ ಆಚರಣೆಗೆ ನಿರ್ಧಾರ ಮಾಡಲಾಗಿದೆ.
ಇದು ಬಜೆಟ್ನ ಒಟ್ಟು ಪ್ರಮಾಣ ಶೇಕಡಾ 15.28 ರಷ್ಟಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಕಳೆದ ವರ್ಷ ಪ್ರವಾಹದಲ್ಲಿ ಹಾನಿಗೊಳಗಾದ 842 ಅಂಗನವಾಡಿಗಳನ್ನು 138 ಕೋಟಿ ರೂಪಾಯಿ ವೆಚ್ಚದಲ್ಲಿ ಸರ್ಕಾರ ರಿಪೇರಿ ಮಾಡುತ್ತಿದೆ ಎಂದಿದ್ದಾರೆ.
ಇದಲ್ಲದೆ, 5.67 ಕೋಟಿ ರೂ. ಗಳ ವೆಚ್ಚದಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಏಳು ಹೊಸ ಬಾಲಮಂದಿರಗಳನ್ನು ರಾಜ್ಯ ಸರ್ಕಾರ ಪ್ರಸ್ತಾಪಿಸಿದೆ. 21 ವರ್ಷಗಳನ್ನು ಪೂರೈಸಿದ ನಂತರ, ಬಾಲಮಂದಿರದಿಂದ ಹೊರಬರುವ ಯುವಕರಿಗೆ ತಿಂಗಳಿಗೆ 5,000 ರೂ. ಸಿಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.