ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮಾರ್ಚ್ 20 ರಂದು ನಡೆಯಲಿರುವ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗುವ ಸುವರ್ಣಾವಕಾಶವನ್ನು ಕೇಂದ್ರ ಸರ್ಕಾರ ಒದಗಿಸಿದೆ. ರಸಪ್ರಶ್ನೆಯಲ್ಲಿ ಭಾಗಿಯಾಗಿ ಸರಿಯಾದ ಉತ್ತರ ನೀಡಿದರೆ ಈ ಅವಕಾಶ ಸಿಗಲಿದೆ. ಈ ರಸಪ್ರಶ್ನೆಯಲ್ಲಿ ಭಾಗವಹಿಸಲು ಕೊನೆ ದಿನಾಂಕ ಮಾರ್ಚ್ 16, 2020.
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ರಸಪ್ರಶ್ನೆ ಬಗ್ಗೆ ಪೋಸ್ಟ್ ಮಾಡಿದ್ದಾರೆ. ರಸಪ್ರಶ್ನೆಗೆ ಉತ್ತರಿಸಲು ಪ್ರಯತ್ನಿಸಿ ಮತ್ತು ಈ ತಿಂಗಳ ಕೊನೆಯಲ್ಲಿ ಭವ್ಯ ಕಾರ್ಯಕ್ರಮದಲ್ಲಿ ಹಾಜರಾಗುವ ಅವಕಾಶವನ್ನು ಪಡೆದುಕೊಳ್ಳಿ ಎಂದು ಮೋದಿ ದೇಶದ ಜನರಿಗೆ ಮನವಿ ಮಾಡಿದ್ದಾರೆ.
“ಪ್ರತಿ ವರ್ಷ, ಹಲವಾರು ತಳಮಟ್ಟದ ಸಾಧಕರಿಗೆ ಪದ್ಮ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತದೆ. ಅವರ ಜೀವನ ಪಯಣಗಳು ಅನೇಕರಿಗೆ ಸ್ಫೂರ್ತಿ ನೀಡುತ್ತವೆ. ಇಲ್ಲಿ ಒಂದು ವಿಶಿಷ್ಟವಾದ ರಸಪ್ರಶ್ನೆ ಸ್ಪರ್ಧೆ ಇದೆ. ರಾಷ್ಟ್ರಪತಿ ಭವನದಲ್ಲಿ ನಡೆಯುವ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸಾಕ್ಷಿಯಾಗಲು ನಿಮಗೆ ಅವಕಾಶ ನೀಡುವ ಪದ್ಮ ರಸಪ್ರಶ್ನೆ ಇದಾಗಿದೆ” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಪದ್ಮ ಪ್ರಶಸ್ತಿಗಳು ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀಯನ್ನು ಒಳಗೊಂಡಿದೆ. ಕಲೆ, ಸಾಮಾಜಿಕ ಕಾರ್ಯ, ಸಾರ್ವಜನಿಕ ಕಾರ್ಯ, ವಿಜ್ಞಾನ ಮತ್ತು ಎಂಜಿನಿಯರಿಂಗ್, ವ್ಯಾಪಾರ ಮತ್ತು ಕೈಗಾರಿಕೆ, ಔಷಧ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ ಮತ್ತು ನಾಗರಿಕ ಸೇವೆಯಲ್ಲಿ ಅಸಾಧಾರಣ ಸಾಧನೆ ಮಾಡಿದವರಿಗೆ ಪದ್ಮ ಪ್ರಶಸ್ತಿ ಲಭಿಸುತ್ತದೆ.
ಸರ್ಕಾರಿ ವೆಬ್ಸೈಟ್ ಮೈಗೌನ 20 ಪ್ರಶ್ನೆಗಳ ರಸಪ್ರಶ್ನೆ ಲಿಂಕ್ನಲ್ಲಿ “ಭಾರತದ ವೀರರ ಜೀವನವನ್ನು ಆಧರಿಸಿದ ಈ ರಸಪ್ರಶ್ನೆ ಮೂಲಕ, ಮೈಗೌವ್ ಅವರಿಗೆ ಸರಿಯಾದ ಮಾನ್ಯತೆ ನೀಡುವಲ್ಲಿ ಪ್ರಾಮಾಣಿಕ ಪ್ರಯತ್ನವನ್ನು ಮಾಡಿದೆ. ರಸಪ್ರಶ್ನೆಯಲ್ಲಿ ಆಯ್ಕೆಯಾದವರು ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಪದ್ಮ ಪ್ರಶಸ್ತಿ 2020 ಸಮಾರಂಭದಲ್ಲಿ ಭಾಗವಹಿಸಲು ಜೀವಮಾನದ ಅವಕಾಶವನ್ನು ಪಡೆಯುತ್ತಾರೆ” ಎಂದಿದೆ.
Every year, several grassroots level achievers are honoured with Padma Awards. Their life journeys inspire many.
Here is a unique quiz competition, the Padma Quiz which gives you an opportunity to witness the Padma Awards ceremony at Rashtrapati Bhavan.https://t.co/J2XksCDyF0 pic.twitter.com/5XCa7Hkq43
— PMO India (@PMOIndia) March 9, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.