ಭೋಪಾಲ್: ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಸಮಸ್ಯೆ ತಲೆದೋರಿದೆ. 19 ಮಂದಿ ಕಾಂಗ್ರೆಸ್ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಲ್ಲಿ ಪತನಗೊಳ್ಳುವುದು ಬಹುತೇಕ ಖಚಿತವಾಗಿದೆ.
19 ಮಂದಿ ಶಾಸಕರು ಪ್ರಸ್ತುತ ಬೆಂಗಳೂರಿನ ರೆಸಾರ್ಟ್ ಒಂದರಲ್ಲಿ ಇದ್ದಾರೆ ಎಂದು ಹೇಳಲಾಗಿದೆ, ಮಾತ್ರವಲ್ಲದೆ ಇವರುಗಳು ತಮ್ಮ ರಾಜೀನಾಮೆ ಪತ್ರವನ್ನು ಕೈಯಲ್ಲಿ ಹಿಡಿದುಕೊಂಡು ಫೋಟೋವನ್ನು ರಿಲೀಸ್ ಮಾಡಿದ್ದಾರೆ.
ಕಮಲನಾಥ್ ಸರಕಾರಕ್ಕೆ ಇದುವರೆಗೆ 121 ಮಂದಿ ಶಾಸಕರ ಬೆಂಬಲ ಇತ್ತು, ಇದರಲ್ಲಿ 114 ಮಂದಿ ಶಾಸಕರು ಕಾಂಗ್ರೆಸ್ ಪಕ್ಷದವರು. ಪ್ರಸ್ತುತ ಅಲ್ಲಿನ ವಿಧಾನಸಭೆಯಲ್ಲಿ ಒಟ್ಟು 228 ಶಾಸಕರ ಬಲವಿದೆ. ಹೀಗಾಗಿ ಸರಳ ಬಹುಮತಕ್ಕೆ 115 ಸ್ಥಾನಗಳ ಅಗತ್ಯವಿದೆ.
19 ಶಾಸಕರು ರಾಜಿನಾಮೆ ಹಿನ್ನಲೆಯಲ್ಲಿ ವಿಧಾನಸಭೆಯಲ್ಲಿ ಸರಕಾರದ ಸರಳ ಬಹುಮತಕ್ಕೆ 105 ಸ್ಥಾನಗಳು ಬೇಕಾಗಿದೆ. ಆದರೆ ಕಾಂಗ್ರೆಸ್ ಬಳಿ ಕೇವಲ 103 ಸ್ಥಾನಗಳಿವೆ. ಬಿಜೆಪಿ ಬಳಿ 107 ಶಾಸಕರ ಬೆಂಬಲವಿದೆ. ಹೀಗಾಗಿ ಪ್ರಸ್ತುತ ಸ್ಥಿತಿಯಲ್ಲಿ ಬಿಜೆಪಿಗೆ ಸುಲಭವಾಗಿ ಸರಕಾರ ರಚನೆ ಮಾಡಬಹುದಾಗಿದೆ.
Delhi: #JyotiradityaScindia arrives at his residence after meeting PM Narendra Modi and HM Amit Shah. Scindia has tendered his resignation to Congress President Sonia Gandhi #MadhyaPradeshCrisis Live updates 👇https://t.co/G2qDtUbXrw pic.twitter.com/Duxc1nEE5f
— Times of India (@timesofindia) March 10, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.