ಮುಂಬೈ: ಪ್ರಸ್ತುತ ಕೊರೋನವೈರಸ್ ಜಗತ್ತಿನಾದ್ಯಂತ ಆತಂಕವನ್ನು ಸೃಷ್ಟಿ ಮಾಡಿದೆ. ಹೋಳಿಯ ಸಂದರ್ಭದಲ್ಲಿ ಮುಂಬೈ ವರ್ಲಿ ಪ್ರದೇಶದಲ್ಲಿ ಕಾಮಣ್ಣನ ಬದಲು ಕೊರೋನವೈರಸ್ ಪ್ರತಿಕೃತಿಯನ್ನು ದಹನ ಮಾಡಲಾಗಿದೆ.
ಕೊರೋನವೈರಸ್ ಎಂಬ ಮಹಾಮಾರಿಯನ್ನು ನಿರ್ಮೂಲನೆ ಮಾಡುವ ಉದ್ದೇಶವನ್ನು ಇಟ್ಟುಕೊಂಡು ಈ ಪ್ರತಿಕೃತಿಯನ್ನು ದಹನ ಮಾಡಲಾಗಿದೆ.
ದೇಶದಾದ್ಯಂತ ಇಂದು ಬಣ್ಣಗಳ ಹಬ್ಬ ಹೋಳಿಯನ್ನು ಸಂಭ್ರಮ ಮತ್ತು ಸಡಗರದಿಂದ ಆಚರಣೆ ಮಾಡಲಾಗುತ್ತಿದೆ. ಜನರು ಬಣ್ಣಗಳನ್ನು ಪರಸ್ಪರ ಎರಚಿ ಸಂಭ್ರಮಿಸುತ್ತಿದ್ದಾರೆ. ಈ ಹಬ್ಬವು ಕೆಟ್ಟದರ ವಿರುದ್ಧ ಒಳ್ಳೆಯದರ ವಿಜಯವನ್ನು ಸಾರುತ್ತದೆ. ಹೋಳಿ ದಹನ ಮತ್ತು ಹೋಳಿ ಮಿಲನ್ ಎಂಬ ಎರಡು ದಿನಗಳ ಹೋಳಿಯನ್ನು ಆಚರಣೆ ಮಾಡಲಾಗುತ್ತದೆ.
ಭಾರತದಲ್ಲಿ ಪ್ರಸ್ತುತ 44 ಮಂದಿ ಕೊರೋನವೈರಸ್ಗೆ ತುತ್ತಾಗಿದ್ದಾರೆ. ಈ ಹಿನ್ನಲೆಯಲ್ಲಿ ಭಾರಿ ಜನಸಮೂಹ ಸೇರಿ ಹೋಳಿ ಆಚರಿಸುವುದನ್ನು ಕೆಲವೆಡೆ ನಿಷೇಧಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.