ಲಕ್ನೋ: 2018ರ ಯುಪಿ ಹೂಡಿಕೆದಾರರ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಯುಪಿ-ಡಿಫೆನ್ಸ್ ಕಾರಿಡಾರ್ (ಯುಪಿಡಿಸಿ) ಯೋಜನೆಯು ನಾಲ್ಕು ನೋಡ್ಗಳಲ್ಲಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಾರಂಭಿಸಿದೆ ಎಂದು ಮೂಲಗಳು ವರದಿ ಮಾಡಿದೆ.
ಬರಡು ಬುಂದೇಲ್ಖಂಡ್ ಪ್ರದೇಶದಲ್ಲಿ ನೆಲೆಗೊಂಡಿರುವ ಮೂಲಸೌಕರ್ಯ ಕಾರಿಡಾರ್ 20,000 ಕೋಟಿ ರೂ.ಗಳ ಹೂಡಿಕೆಯನ್ನು ಆಕರ್ಷಿಸುವ ಮತ್ತು 2.5 ಲಕ್ಷ ಜನರಿಗೆ ಉದ್ಯೋಗ ಸೃಷ್ಟಿಸುವ ನಿರೀಕ್ಷೆಯಿದೆ.
ಭೂಮಿಯ ಲಭ್ಯತೆ ಮತ್ತು ಈ ಪ್ರದೇಶದಲ್ಲಿ ಬಲವಾದ ಪೂರಕ ನೆಲೆ ಇರುವ ಕಾರಣ ಬುಂದೇಲ್ಖಂಡ್ ಅನ್ನು ಯೋಜನೆಗೆ ಆಯ್ಕೆ ಮಾಡಲಾಗಿದೆ.
ಉತ್ತರ ಪ್ರದೇಶದ ಎಕ್ಸ್ಪ್ರೆಸ್ವೇಸ್ ಕೈಗಾರಿಕಾ ಅಭಿವೃದ್ಧಿ ಪ್ರಾಧಿಕಾರದ (ಯುಪಿಇಡಿಎ) ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಸಿಇಒ ಅವನಿಶ್ ಕುಮಾರ್ ಅವಸ್ಥಿ ಈ ಬಗ್ಗೆ ಈ ಬಗ್ಗೆ ಮಾಹಿತಿಯನ್ನು ನೀಡಿದ್ದು, “ಮೊದಲ ಹಂತದ ಭಾಗವಾಗಿ 4 ನೋಡ್ಗಳಲ್ಲಿ ಸುಮಾರು 3,788 ಹೆಕ್ಟೇರ್ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬೇಕಿದೆ, ಅದರಲ್ಲಿ 1,455 ಹೆಕ್ಟೇರ್ ಪ್ರದೇಶವನ್ನು ಈಗಾಗಲೇ ಗುರುತಿಸಲಾಗಿದೆ. ಝಾನ್ಸಿ, ಖಾನ್ಪುರ್, ಚಿತ್ರಕೂಟ ಮತ್ತು ಅಲಿಗಢದಲ್ಲಿ ಭೂಮಿಯನ್ನು ಗುರುತಿಸಲಾಗಿದೆ. ಇದರಲ್ಲಿ, ಸುಮಾರು 1,200 ಹೆಕ್ಟೇರ್ ಪ್ರದೇಶವನ್ನು ಈಗಾಗಲೇ ಸ್ವಾಧೀನಪಡಿಸಿಕೊಳ್ಳಲಾಖಿದೆ, ಮುಖ್ಯವಾಗಿ ಝಾನ್ಸಿ, ಅಲಿಗಢ ಮತ್ತು ಚಿತ್ರಕೂಟ್ದಲ್ಲಿ ಭೂಮಿ ವಶಪಡಿಸಿಕೊಳ್ಳಲಾಗಿದೆ ” ಎಂದಿದ್ದಾರೆ.
ದೇಶೀಕರಣವನ್ನು ಉತ್ತೇಜಿಸುವುದು ಮತ್ತು ಮೇಕ್ ಇನ್ ಇಂಡಿಯಾ ಉಪಕ್ರಮವನ್ನು ಬೆಂಬಲಿಸುವುದು ಯುಪಿಡಿಸಿಯ ಹಿಂದಿನ ಮುಖ್ಯ ಉದ್ದೇಶವಾಗಿದೆ.
ಇತ್ತೀಚೆಗೆ ಮುಕ್ತಾಯಗೊಂಡ ಡೆಫ್ಎಕ್ಸ್ಪೋ 2020ನಲ್ಲಿ ಯುಪಿ ರಾಜ್ಯ ಸರ್ಕಾರದೊಂದಿಗೆ 23 ಕಂಪನಿಗಳು ಸಹಿ ಮಾಡಿದೆ 50,000 ಕೋಟಿ ರೂಪಾಯಿ ಮೊತ್ತದ ಒಪ್ಪಂದ ಇದಾಗಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 2020-21ರ ಬಜೆಟ್ ಮಂಡಿಸಿದಾಗ, ಈ ಯೋಜನೆಯು 2024 ರ ವೇಳೆಗೆ ರಾಜ್ಯವನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲು ಸಹಾಯ ಮಾಡುತ್ತದೆ ಎಂದು ಹೇಳಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.