ಬೆಂಗಳೂರು: ಶಿಕ್ಷಕರ ವರ್ಗಾವಣೆ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಶಿಕ್ಷಕರ ವರ್ಗಾವಣೆ ನಿಯಂತ್ರಣ ಮಸೂದೆಯನ್ನು ಸರ್ಕಾರ ಮಂಗಳವಾರ ಸದನದಲ್ಲಿ ಮಂಡನೆ ಮಾಡಿತು. ವರ್ಷಂಪ್ರತಿ ಎಪ್ರಿಲ್, ಮೇ ನಲ್ಲಿ ಗಣಕೀಕೃತವಾಗಿ ನಡೆಯುತ್ತಿದ್ದ ಕೌನ್ಸಲಿಂಗ್ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರದ ಆದೇಶದ ಮೇರೆಗೆ ವಿಶೇಷ ಸನ್ನಿವೇಶಗಳಲ್ಲಿ ನಡೆಸಬಹುದು ಎಂದು ಈ ಮಸೂದೆ ತಿಳಿಸಿದೆ.
ಶಿಕ್ಷಕರಿಗೆ ತಮ್ಮ ಆಧ್ಯತೆಯ ಮೇರೆಗೆ ಶಾಲೆಗಳನ್ನು ಆಯ್ಕೆ ಮಾಡುವುದಕ್ಕೂ ಮಸೂದೆಯಲ್ಲಿ ಅವಕಾಶಗಳನ್ನು ಕಲ್ಪಿಸಲಾಗಿದೆ. ಕಲ್ಯಾಣ ಕರ್ನಾಟಕದ ಆರು ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರು, ಆ ಪ್ರದೇಶಗಳನ್ನು ಹೊರತುಪಡಿಸಿ ಹೊರ ಜಿಲ್ಲೆಗಳಿಗೆ ಹೋಗಬೇಕಾದರೆ ಕನಿಷ್ಟ 10 ವರ್ಷಗಳ ಕಾಲ ಸೇವೆಯನ್ನು ಪೂರ್ಣಗೊಳಿಸಿರುವಂತೆಯೂ ಈ ಮಸೂದೆಯಲ್ಲಿ ತಿಳಿಸಲಾಗಿದೆ.
ವಾರ್ಷಿಕ ಶೇ. 15 ರ ಮಿತಿಯಲ್ಲಿ ವರ್ಗಾವಣೆ ಮಾಡುವ ಪ್ರಸ್ತಾವವನ್ನೂ ಮಂಡಿಸಲಾಗಿದೆ. ಹೆಚ್ಚು ಸಮಯಗಳ ಕಾಲ ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರಿಗೆ ನಗರ ಪ್ರದೇಶಗಳನ್ನು ಆಯ್ಕೆ ಮಾಡಿಕೊಳ್ಳುವುದಕ್ಕೂ ಅವಕಾಶಗಳನ್ನು ಕಲ್ಪಿಸಲಾಗಿದೆ.
ಪದವಿ ಪೂರ್ವ ಹಾಗೂ ಪದವಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕ ವರ್ಗದ ಉಪಬಂಧವನ್ನು ಹೊರತುಪಡಿಸಿ ಅಧಿನಿಯಮ 2007ನ್ನು ನಿರಸನಗೊಳಿಸುವ ಬಗ್ಗೆಯೂ ಈ ಮಸೂದೆಯಲ್ಲಿ ತಿಳಿಸಲಾಗಿದೆ.
ಒಟ್ಟಿನಲ್ಲಿ ಶಿಕ್ಷಕರು ಎದುರಿಸುತ್ತಿದ್ದ ಬಹುಕಾಲದ ಸಮಸ್ಯೆಗಳನ್ನು ಬಗೆಹರಿಸುವುದಕ್ಕಾಗಿ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಆ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಮತ್ತಷ್ಟು ಹೊಸ ಸಾಧ್ಯತೆಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿಯೂ ದಿಟ್ಟ ಹೆಜ್ಜೆ ಇಟ್ಟಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.