ನವದೆಹಲಿ: ಕೊರೋನವೈರಸ್ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಮಗ್ರ ಕ್ರಮಗಳನ್ನು ತೆಗೆದುಕೊಳ್ಳಲು ಭಾರತೀಯ ರೈಲ್ವೆ ದೊಡ್ಡ ರೀತಿಯಲ್ಲಿ ಸಜ್ಜುಗೊಂಡಿದೆ. ಭಾರತೀಯ ರೈಲ್ವೆ ವ್ಯವಸ್ಥೆಯಾದ್ಯಂತ ಸಾಕಷ್ಟು ಮುಂಜಾಗೃತ ಕ್ರಮಗಳನ್ನು ಜಾರಿಗೆ ತರಲು ರೈಲ್ವೆ ಸಚಿವ ಪಿಯೂಷ್ ಗೋಯಲ್ ರೈಲ್ವೆ ಮಂಡಳಿಗೆ ನಿರ್ದೇಶನ ನೀಡಿದ್ದಾರೆ.
ರೈಲ್ವೆ ಮಂಡಳಿಯ ಅಧ್ಯಕ್ಷರಾದ ವಿನೋದ್ ಕುಮಾರ್ ಯಾದವ್ ಅವರು 2020 ರ ಮಾರ್ಚ್ 5 ಮತ್ತು 6 ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ಸಾಮಾನ್ಯ ವ್ಯವಸ್ಥಾಪಕರೊಂದಿಗೆ ಸಭೆ ನಡೆಸಿ ಸನ್ನದ್ಧತೆಯನ್ನು ಪರಿಶೀಲಿಸಲು ಮತ್ತು ಆದ್ಯತೆಗಳು ಗೊತ್ತುಪಡಿಸಲು ನಿರ್ದೇಶನಗಳನ್ನು ನೀಡಿದ್ದಾರೆ.
ರೈಲ್ವೆ ವಲಯಗಳು, ವಿಭಾಗಗಳು ಮತ್ತು ಘಟಕಗಳ ಮುಖ್ಯಸ್ಥರು ಕೊರೋನ ಮುಂಜಾಗೃತೆಯ ಕ್ರಮವಾಗಿ ಆಯಾ ಪ್ರದೇಶಗಳಲ್ಲಿ ಸಭೆ ನಡೆಸುತ್ತಿದ್ದಾರೆ. ಭಾರತೀಯ ರೈಲ್ವೆ ವ್ಯವಸ್ಥೆಯಲ್ಲಿ ಎಲ್ಲಾ ಹಂತಗಳಲ್ಲಿ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಮತ್ತು ರೈಲ್ವೆ ಮಂಡಳಿ ಮಟ್ಟದಲ್ಲಿ, ವಲಯ ಮಟ್ಟದಲ್ಲಿ ಮತ್ತು ವಿಭಾಗ ಮಟ್ಟದಲ್ಲಿ ಮೇಲ್ವಿಚಾರಣೆ ನಿರಂತರವಾಗಿ ನಡೆಯುತ್ತಿದೆ.
ರೈಲ್ವೆ ವ್ಯವಸ್ಥೆಯಾದ್ಯಂತ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ ಮತ್ತು ಸಿಬ್ಬಂದಿಗೆ ವಿಷಯದ ಬಗ್ಗೆ ಶಿಕ್ಷಣ ನೀಡಲಾಗಿದೆ. ಸಂಬಂಧಪಟ್ಟ ಆರೋಗ್ಯ ಅಧಿಕಾರಿಗಳ ಸಹಯೋಗ ಮತ್ತು ಸಮನ್ವಯವನ್ನು ಸಹ ಖಚಿತಪಡಿಸಿಕೊಳ್ಳಲಾಗುತ್ತಿದೆ.
ರೈಲ್ವೆ ಆಸ್ಪತ್ರೆಗಳಲ್ಲಿ, ಜ್ವರದಿಂದ ಬಳಲುತ್ತಿರುವವರನ್ನು ಇತರ ರೋಗಿಗಳಿಂದ ಬೇರ್ಪಡಿಸಲಾಗುತ್ತಿದೆ. ಜ್ವರ ಪ್ರಕರಣಗಳಿಗೆ ನಿರ್ದಿಷ್ಟ ಸಂಕೇತಗಳೊಂದಿಗೆ ಪ್ರತ್ಯೇಕ ಕೌಂಟರ್ / ವಾರ್ಡ್ ಸ್ಥಾಪಿಸಲಾಗಿದೆ. ಆಯಾ ಪ್ರದೇಶಗಳಲ್ಲಿ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಶಂಕಿತ ಕೊರೋನ ವೈರಸ್ ಪ್ರಕರಣಗಳಿಗೆ ಚಿಕಿತ್ಸೆ ನೀಡಲು ಜ್ವರ ಸಂಬಂಧಿತ ಪ್ರಕರಣಗಳಿಗೆ ರೈಲ್ವೆ ಆಸ್ಪತ್ರೆಗಳಿಗೆ 110 ಪ್ರತ್ಯೇಕ ಹಾಸಿಗೆಗಳನ್ನು ಒದಗಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.