ಹೈದರಾಬಾದ್: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಬಳಕೆ ಅವ್ಯಾಹತವಾಗಿದೆ. ಮಕ್ಕಳು, ಹಿರಿಯರೆನ್ನದೆ ಎಲ್ಲಾ ವಯಸ್ಸಿನ ಜನರೂ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದಾರೆ. ಇಲ್ಲಿ ಸಮಾಜಕ್ಕೆ ಪೂರಕವಾದ ವಿಚಾರಗಳಿಗಿಂತ ಹೆಚ್ಚಾಗಿ ಸಮಾಜದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಂಗತಿಗಳೇ ಹೆಚ್ಚು ನಡೆಯುತ್ತವೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಸಮಾಜದ ಸ್ವಾಸ್ಥ್ಯ ಕದಡುವವರಿಗೇನೂ ಕಮ್ಮಿ ಇಲ್ಲ. ಹೀಗೆ ಸುಳ್ಳು ಸುದ್ದಿ ಹಬ್ಬಿದ ವ್ಯಕ್ತಿಯೊಬ್ಬ ಹೈದರಾಬಾದ್ ಪೊಲೀಸರ ಬಲೆಗೆ ಬಿದ್ದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಕೋಮು ದ್ವೇಷವನ್ನು ಹರಡುವ ಮೂಲಕ ಗಲಭೆಯನ್ನು ಸೃಷ್ಟಿ ಮಾಡುವ ಉದ್ದೇಶದಿಂದ ಈತ ನಕಲಿ ಸುದ್ದಿಯನ್ನು ಹರಿಬಿಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಈ ಹಿಂದೆಯೇ ತೆಲಂಗಾಣ ಪೊಲೀಸರು ವದಂತಿಗಳನ್ನು ಹಬ್ಬದಂತೆ ಮತ್ತು ಕೂಲಂಕುಶವಾಗಿ ಪೂರ್ವಾಪರಗಳನ್ನು ತಿಳಿದುಕೊಳ್ಳದೆ ಯಾವುದೇ ವಿಚಾರವನ್ನು ನಂಬದಂತೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನೂ ಮಾಡಿದ್ದರು. ಆದರೆ ಈ ನಡುವೆಯೂ ವ್ಯಕ್ತಿಯೊಬ್ಬ ಸುಳ್ಳು ಸುದ್ದಿಗಳನ್ನು ಹರಡುವ ಮೂಲಕ ಪೊಲೀಸರ ಅತಿಥಿಯಾಗಿದ್ದಾನೆ. ಆರೋಪಿಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿಯೂ ಪೊಲೀಸರು ಈಗಾಗಲೇ ತಿಳಿಸಿದ್ದಾರೆ. ಅಲ್ಲದೆ ಇಂತಹ ಅಪರಾಧಗಳಿಗೆ ಕಠಿಣ ಶಿಕ್ಷೆ ನೀಡುವ ಎಚ್ಚರಿಕೆಯನ್ನೂ ಸಾರ್ವಜನಿಕರಿಗೆ ತಲುಪಿಸಿದ್ದಾರೆ.
ಈ ಬಗ್ಗೆ ಹೈದರಾಬಾದ್ನ ಕಮಿಷನರ್ ಅಂಜನ್ ಕುಮಾರ್ ಮಾತನಾಡಿದ್ದು, ಸಾರ್ವಜನಿಕ ವಲಯದಲ್ಲಿ ವದಂತಿಗಳ ಮೂಲಕ ಸಾಮರಸ್ಯ, ಶಾಂತಿ ಕದಡುವ ಕೆಲಸ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ತಿಳಿಸಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣಗಳ ಗ್ರೂಪ್ಗಳ ಅಡ್ಮಿನ್ಗಳಿಗೂ ಹೀಗಾದಲ್ಲಿ ಕ್ರಮ ಕೈಗೊಳ್ಳುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕ ಜೀವನಕ್ಕೆ ಹಾನಿ ಎಸಗುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ಪೊಲೀಸರ ಕ್ರಮ ಮಾದರಿಯೇ ಸರಿ. ದೇಶದೆಲ್ಲೆಡೆ ಈ ರೀತಿಯ ಕಾನೂನು ಜಾರಿಯಾದಲ್ಲಿ ಮಾತ್ರ ಇಂತಹ ಘಟನೆಗಳಿಗೆ ಕಡಿವಾಣ ಹಾಕುವುದು ಸಾಧ್ಯ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.