ನವದೆಹಲಿ: ಯೆಸ್ ಬ್ಯಾಂಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅದರ ಸಂಸ್ಥಾಪಕ ರಾಣಾ ಕಪೂರ್ನನ್ನು ಸ್ಪೆಷಲ್ ಪ್ರಿವೆನ್ಷನ್ ಆಫ್ ಮನೀ ಲ್ಯಾಂಡರಿಂಗ್ ಕಾಯ್ದೆಯ ಅನ್ವಯ, ಮಾರ್ಚ್ 16 ರ ವರೆಗೆ ಕಸ್ಟಡಿಗೆ ತೆಗೆದುಕೊಳ್ಳುವುದಕ್ಕೆ ಜಾರಿ ನಿರ್ದೇಶನಾಲಯ (ಎನ್ಫೋರ್ಸ್ಮೆಂಟ್ ಡೈರೆಕ್ಟೋರೇಟ್)ಗೆ ನ್ಯಾಯಾಲಯ ಅನುಮತಿ ನೀಡಿದೆ.
ಸುಮಾರು 78 ಕಂಪೆನಿಗಳ ಜೊತೆಗೆ ರಾಣಾ ಕುಟುಂಬ ನಂಟು ಹೊಂದಿದ್ದು, 20,000 ಕೋಟಿ ರೂ. ಗಳ ವಹಿವಾಟು ನಡೆಸಿದೆ. ಈ ಎಲ್ಲ ವಿಚಾರಗಳ ಬಗ್ಗೆಯೂ ಇಡಿ ತನಿಖೆ ನಡೆಸುತ್ತಿದೆ ಎಂದು ಇಡಿ ಅಧಿಕಾರಿ ಸುನಿಲ್ ಅವರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ. ಅಲ್ಲದೆ ಕಪೂರ್ಗೆ ಸಂಬಂಧಿಸಿದ ಸ್ಥಳಗಳಲ್ಲಿ ತನಿಖೆ ನಡೆಸಿದಾಗ ಸಿಕ್ಕಿದ ಆಧಾರಗಳನ್ನು ಗಮನದಲ್ಲಿಟ್ಟುಕೊಂಡು ಈ ಪ್ರಕರಣವನ್ನು ದಾಖಲಿಸಿರುವುದಾಗಿ ತಿಳಿಸಿದ್ದಾರೆ.
ರಾಣಾ ವಿರುದ್ಧದ ಪ್ರಕರಣಕ್ಕೆ ವಿರೋಧ ವ್ಯಕ್ತಪಡಿಸಿರುವ ಅವರ ವಕೀಲ ಸತೀಶ್ ಮಾನಸಿಂದೆ, ಅವರು ಬ್ಯಾಂಕ್ನ ವಹಿವಾಟುಗಳಿಂದ ಮುಕ್ತರಾಗುವ ಸಂದರ್ಭದಲ್ಲಿ ಬ್ಯಾಂಕ್ ಕೇವಲ ಶೇ. 1 ರಷ್ಟು ಮಾತ್ರವೇ ಸಾಲ ಹೊಂದಿತ್ತು. ಅನಂತರದ ದಿನಗಳಲ್ಲಿ ಬ್ಯಾಂಕ್ ಆರ್ಥಿಕ ಹೊಡೆತ ಅನುಭವಿಸಿದೆ. ಈ ಪ್ರಕರಣಕ್ಕೆ ಕುರಿತಂತೆ ಪ್ರಕರಣ ದಾಖಲಾಗುವುದಕ್ಕೂ ಮುನ್ನವೇ ಇಡಿ ಅಧಿಕಾರಿಗಳು ಕಪೂರ್ಗೆ ಸಂಬಂಧಿಸಿದ ಸ್ಥಳಗಳಲ್ಲಿ ತನಿಖೆ ನಡೆಸಿದ್ದಾರೆ ಎಂಬುದಾಗಿ ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಇಡಿ ಅಧಿಕಾರಿಗಳು ಕೇಸು ದಾಖಲಿಸಿದ ನಂತರವಷ್ಟೇ ಸಿಬಿಐ ಅಧಿಕಾರಿಗಳು ಕಪೂರ್ ವಿರುದ್ಧ ದೂರು ದಾಖಲು ಮಾಡಿರುವುದಾಗಿಯೂ ಅವರು ತಿಳಿಸಿದ್ದಾರೆ. ಕಾನೂನಿನ ಪ್ರಕಾರ ಆರ್ಥಿಕ ಅಪರಾಧಗಳ ಸಂದರ್ಭಲ್ಲಿ ಬೇರೊಂದು ಸಂಸ್ಥೆ ಪ್ರಕರಣ ದಾಖಲಿಸಿದ ನಂತರವಷ್ಟೇ ಇಡಿ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ಆರಂಭಿಸಬೇಕು ಎಂಬುದಾಗಿಯೂ ಅವರು ತಿಳಿಸಿದ್ದಾರೆ.
ಬ್ಯಾಂಕ್ಗಳನ್ನು ನಿರ್ವಹಣೆ ಮಾಡುತ್ತಿರುವ ವ್ಯಕ್ತಿಗಳ ಆರ್ಥಿಕ ಅಕ್ರಮಗಳ ಬಗ್ಗೆ ತನಿಖೆ ನಡೆಯಬೇಕಾಗಿದೆ. ಅಲ್ಲದೆ ಇದಕ್ಕೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆಯನ್ನೂ ನಡೆಸಬೇಕಾಗಿದೆ. ಅಲ್ಲದೆ ಆರೋಪಿಗಳ ವಿಚಾರಣೆಯನ್ನೂ ನಡೆಸಬೇಕಾಗಿದೆ ಎಂದು ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.