ದೆಹಲಿ: ಪಾಪ್ಯಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯ ಅಧ್ಯಕ್ಷ ಪರ್ವೆಝ್ ಅಹ್ಮದ್ ಮತ್ತು ಕಾರ್ಯದರ್ಶಿ ಮಹಮ್ಮದ್ ಇಲ್ಯಾಸ್ ಅನ್ನು ದೆಹಲಿ ಹಿಂಸಾಚಾರಕ್ಕೆ ಪಿತೂರಿ ನಡೆಸಿದ ಆರೋಪದ ಮೇರೆಗೆ ದೆಹಲಿ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 143 (ಗಲಭೆಗೆ ಶಿಕ್ಷೆ), 148 (ಗಲಭೆ, ಮಾರಣಾಂತಿಕ ಆಯುಧದ ಹೊಂದುವಿಕೆ) ಮತ್ತು 120-ಬಿ (ಕ್ರಿಮಿನಲ್ ಪಿತೂರಿ) ಅಡಿಯಲ್ಲಿ ಎಫ್ಐಆರ್ ದಾಖಲಾದ ಕೆಲವೇ ದಿನಗಳಲ್ಲಿ ಬಂಧನ ಮಾಡಲಾಗಿದೆ.
ತೀವ್ರಗಾಮಿ ಸಂಘಟನೆ ಎಂದೇ ಹೇಳಲಾಗುವ ಪಿಎಫ್ಐ ಸಂಘಟನೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆಗೆ ಧನಸಹಾಯ ನೀಡಿದ, ಗಲಭೆ ಎಬ್ಬಿಸಲು ಪ್ರಮುಖ ಪಾತ್ರ ವಹಿಸಿದ ಆರೋಪವನ್ನು ಹೊತ್ತುಕೊಂಡಿದೆ. ಈ ಹಿಂದೆ ಪೊಲೀಸರು 32 ವರ್ಷದ ಪಿಎಫ್ಐ ಕಾರ್ಯಕರ್ತ ಡ್ಯಾನಿಶ್ ಅನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿದರು.
ಈಶಾನ್ಯ ದೆಹಲಿಯಲ್ಲಿ ಇತ್ತೀಚೆಗೆ ನಡೆದ ಕೋಮು ಗಲಭೆಗಳಿಗೆ ಧನಸಹಾಯ ನೀಡಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯವು ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ತಾಹಿರ್ ಹುಸೇನ್, ಇಸ್ಲಾಮಿಕ್ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಮತ್ತು ಇತರರ ಮೇಲೆ ಬುಧವಾರ ಪ್ರಕರಣ ದಾಖಲಿಸಿದೆ.
ದೆಹಲಿ ಗಲಭೆಯಲ್ಲಿ 52 ಮಂದಿ ಸಾವನ್ನಪ್ಪಿದ್ದರು ಮತ್ತು ಸುಮಾರು 200 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಪಿತೂರಿಯಿಂದ ನಡೆದ ಈ ಕೋಮು ಗಲಭೆಗಳಿಗೆ ಧನ ಸಹಾಯ ನೀಡಲು ಹುಸೇನ್, ಪಿಎಫ್ಐ ಮತ್ತು ಇತರರು ಮಾಡಿದ ಅಕ್ರಮ ಹಣಕಾಸು ವ್ಯವಹಾರದ ಬಗ್ಗೆಯೂ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.