ರಾಯ್ಪುರ: ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ಮೂವರು ನಕ್ಸಲರು ಪೊಲೀಸರು ಮತ್ತು ಸಿಆರ್ಪಿಎಫ್ ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ. ಶರಣಾಗತರಾದವರಲ್ಲಿ ಒರ್ವ ಮಹಿಳೆಯೂ ಸೇರಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಾರ್ಚ್ 13 ರಂದು ನಕ್ಸಲರು ಶಸ್ತ್ರಸ್ತ್ರಗಳನ್ನು ತ್ಯಾಗ ಮಾಡಿ ಶರಣಾಗತರಾಗಿದ್ದಾರೆ.
“ಸಿಆರ್ಪಿಎಫ್ ಮತ್ತು ಪೊಲೀಸರು ರಾಜ್ಯದಲ್ಲಿ ನಕ್ಸಲರ ವಿರುದ್ಧ ಅಭಿಯಾನವನ್ನು ನಡೆಸುತ್ತಿದ್ದಾರೆ. ಅನೇಕ ನಕ್ಸಲರು ಮೊದಲೇ ತಮ್ಮನ್ನು ಶರಣಾಗತರನ್ನಾಗಿಸಿದ್ದಾರೆ. ಈ ಬಾರಿ ಮೂರು ನಕ್ಸಲರು ತಮ್ಮನ್ನು ಶರಣಾಗಿಸಿದ್ದಾರೆ. ಕೆಲವು ನಕ್ಷಲರ ತಲೆಗೆ ನಗದು ಬಹುಮಾನವನ್ನು ಘೋಷಿಸಲಾಗಿದೆ” ಎಂದು ಪೊಲೀಸ್ ಅಧೀಕ್ಷಕ ಶಲಾಭ್ ಸಿನ್ಹಾ ಹೇಳಿದ್ದಾರೆ.
ಶರಣಾದ ನಕ್ಸಲರು ಟೊಳ್ಳು ಮಾವೋವಾದಿ ಸಿದ್ಧಾಂತದ ಬಗ್ಗೆ ನಿರಾಶೆ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಶರಣಾದ ನಕ್ಸಲ್ ಒಬ್ಬ ಪ್ರತಿಕ್ರಿಯೆಯನ್ನು ನೀಡಿ, “ನಾವು ನಕ್ಸಲ್ ಸಂಘಟನೆಯನ್ನು ಬಿಡಲು ನಿರ್ಧರಿಸಿದ್ದೇವೆ. ಟೊಳ್ಳಾದ ಮಾವೋವಾದಿ ಸಿದ್ಧಾಂತದಿಂದ ನಾವು ನಿರಾಶೆಗೊಂಡಿದ್ದೇವೆ. ರಾಜ್ಯ ಸರ್ಕಾರದ ಶರಣಾಗತಿ ಮತ್ತು ಪುನರ್ವಸತಿ ನೀತಿಯ ಬಗ್ಗೆ ನಾವು ಪ್ರಭಾವಿತರಾಗಿದ್ದೇವೆ” ಎಂದಿದ್ದಾನೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.