ಬೆಂಗಳೂರು: ವಿದ್ಯುತ್ ಸಮಸ್ಯೆಯ ಕಾರಣಕ್ಕೆ ಗ್ರಾಮ ಪಂಚಾಯತ್ಗಳಲ್ಲಿ ಹಲವು ವಹಿವಾಟುಗಳು ನಿಧಾನ ಗತಿಯಲ್ಲಿ ಸಾಗುವುದು, ಇಲ್ಲವೇ ಮೂಲೆ ಸೇರುವುದು ಸರ್ವೇ ಸಾಮಾನ್ಯ. ಇಂತಹ ದೋಷಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದ್ದು, ಮುಂದಿನ 15 ದಿನಗಳೊಳಗಾಗಿ ಎಲ್ಲಾ ಗ್ರಾಮ ಪಂಚಾಯತ್ಗಳಲ್ಲಿಯೂ ಸೋಲಾರ್ ವ್ಯವಸ್ಥೆಯನ್ನು ಜಾರಿಗೆ ತರುವ ಬಗ್ಗೆ ಸಚಿವ ಕೆ ಎಸ್ ಈಶ್ವರಪ್ಪ ಅವರು ಮಾಹಿತಿ ನೀಡಿದ್ದಾರೆ.
ವಿದ್ಯುತ್ನ ಅಸಮರ್ಪಕ ಪೂರೈಕೆಯ ಕಾರಣದಿಂದಾಗಿ, ಜನ ಸಾಮಾನ್ಯರ ಅದೆಷ್ಟೋ ಕೆಲಸಗಳು ಗ್ರಾಮ ಪಂಚಾಯತ್ಗಳಲ್ಲಿ ಮೂಲೆ ಸೇರುತ್ತಿವೆ. ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಈ ಕ್ರಮಕ್ಕೆ ಮುಂದಾಗಿದ್ದು, ಈಗಾಗಲೇ ಸೋಲಾರ್ ಸಿಸ್ಟಮ್ ತಯಾರಿಕ ಸಂಸ್ಥೆಗಳ ಜೊತೆಗೆ ಮಾತುಕತೆಗಳನ್ನು ನಡೆಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಮೂರು ಲಕ್ಷ ರೂ. ಗಳ ಒಳಗೆ ಈ ಯೋಜನೆಯನ್ನು ಸಿದ್ದಪಡಿಸಿಕೊಳ್ಳುವುದಕ್ಕೆ ಒಪ್ಪಿಕೊಂಡ ಕಂಪನಿಗಳಿಂದ ಸೋಲಾರ್ ಖರೀದಿ ಮಾಡುವುದರ ಜೊತೆಗೆ, ಈ ಮೊತ್ತವನ್ನು ನೀಡಲು ಸಶಕ್ತವಲ್ಲದ ಗ್ರಾಮ ಪಂಚಾಯತಿಗಳಿಗೆ ವಿವೇಚನಾ ನಿಧಿಯಿಂದ ಸೋಲಾರ್ ವ್ಯವಸ್ಥೆ ಕಲ್ಪಿಸುವಂತೆ ಆಯಾಯ ಶಾಸಕರಿಗೆ ಮನವಿ ಮಾಡುವುದಾಗಿಯೂ ಅವರು ತಿಳಿಸಿದ್ದಾರೆ.
ಅಲ್ಲದೆ ಇಂಟರ್ನೆಟ್ ಸಮಸ್ಯೆಗಳನ್ನು ಪರಿಹಾರ ಮಾಡುವ ನಿಟ್ಟಿನಲ್ಲಿಯೂ ಕ್ರಮ ಕೈಗೊಳ್ಳುವ ಭರವಸೆಯನ್ನು ಅವರು ನೀಡಿದ್ದಾರೆ. ಸಿಬ್ಬಂದಿ ನೇಮಕಾತಿ ಸೇರಿದಂತೆ ಸಂಪೂರ್ಣ ಪಂಚಾಯತ್ಗಳ ಬಲವರ್ಧನೆಯ ದೃಷ್ಟಿಯಿಂದ ಪಂಚಾಯತ್ ರಾಜ್ ಕಾಯ್ದೆಯಲ್ಲಿಯೂ ಕೆಲವೊಂದು ಮಾರ್ಪಾಡುಗಳನ್ನು ಮಾಡುವುದಾಗಿ ಅವರು ಮಾಹಿತಿ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.