ನವದೆಹಲಿ: ದೇಶದಲ್ಲಿ ನೋವೆಲ್ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಭಾನುವಾರ ಪ್ರಕರಣ 110 ಕ್ಕೆ ಏರಿದೆ. ಭಾನುವಾರ ಉತ್ತರಾಖಂಡ ತನ್ನ ಮೊದಲ ಪ್ರಕರಣವನ್ನು ದಾಖಲಿಸಿಕೊಂಡಿದೆ. ಮಹಾರಾಷ್ಟ್ರ ಮತ್ತು ಉತ್ತರಪ್ರದೇಶದಲ್ಲಿ ತಲಾ ಒಂದು ಹೊಸ ಪ್ರಕರಣವನ್ನು ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇದುವರೆಗೆ ಮೃತ ಪ್ರಕರಣಗಳ ಸಂಖ್ಯೆ ದೆಹಲಿ ಮತ್ತು ಕರ್ನಾಟಕದಲ್ಲಿ ತಲಾ ಒಂದು ವರದಿಯಾಗಿದೆ. ಸೌದಿ ಅರೇಬಿಯಾದಿಂದ ಹಿಂದಿರುಗಿದ ಕಲಬುರಗಿಯ 76 ವರ್ಷದ ವ್ಯಕ್ತಿ ಮಾರ್ಚ್ 10 ರಂದು ಸಾವನ್ನಪ್ಪಿದ್ದರೆ, ಮಾ.13ರಂದು ಕೊರೋನಾವೈರಸ್ ಹೊಂದಿದ್ದ ದೆಹಲಿಯ 68 ವರ್ಷದ ಮಹಿಳೆ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ನಿಧನರಾದರು.
ಮಹಾರಾಷ್ಟ್ರದಲ್ಲಿ ಭಾನುವಾರ ದೃಢಪಟ್ಟ ಪ್ರಕರಣಗಳ ಸಂಖ್ಯೆ 33 ಕ್ಕೆ ಏರಿದ್ದು, ಕೇರಳದಲ್ಲಿ 22 ಸಂಖ್ಯೆಗಳಿವೆ.
ದೆಹಲಿಯಲ್ಲಿ ಇದುವರೆಗೆ ಏಳು ಮತ್ತು ಉತ್ತರ ಪ್ರದೇಶ 12, ಕರ್ನಾಟಕದಲ್ಲಿ ಆರು ಕೊರೋನಾವೈರಸ್ ರೋಗಿಗಳಿದ್ದಾರೆ. ಲಡಾಖ್ ಮೂರು ಮತ್ತು ಜಮ್ಮು ಮತ್ತು ಕಾಶ್ಮೀರ ಎರಡು ರೋಗಿಗಳಿದ್ದಾರೆ. ತೆಲಂಗಾಣದಲ್ಲಿ ಮೂರು ಪ್ರಕರಣಗಳು ವರದಿಯಾಗಿವೆ. ರಾಜಸ್ಥಾನದಲ್ಲಿ ಎರಡು ಪ್ರಕರಣಗಳು ವರದಿಯಾಗಿವೆ. ತಮಿಳುನಾಡು, ಆಂಧ್ರಪ್ರದೇಶ ಮತ್ತು ಪಂಜಾಬ್ನಲ್ಲಿ ತಲಾ ಒಂದು ಪ್ರಕರಣ ವರದಿ ಆಗಿದೆ.
16 ಇಟಾಲಿಯನ್ ಪ್ರವಾಸಿಗರು ಮತ್ತು ಕೆನಡಾದವರು ಸೇರಿದಂತೆ ಈ ಕಾಯಿಲೆಯಿಂದ ಸೋಂಕಿಗೆ ಒಳಗಾದ 17 ವಿದೇಶಿ ಪ್ರಜೆಗಳು ಭಾರತದಲ್ಲಿ ಇದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನ ನಿಲ್ದಾಣಗಳಲ್ಲಿ ಪರೀಕ್ಷಿಸಲ್ಪಟ್ಟ ಒಟ್ಟು ಪ್ರಯಾಣಿಕರ ಸಂಖ್ಯೆ 12,76,046 ಎಂದು ಸಚಿವಾಲಯ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.