ನವದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲು ಕೇವಲ ಐದು ದಿನಗಳು ಮಾತ್ರ ಬಾಕಿ ಇದೆ. ಹೀಗಾಗಿ ತಿಹಾರ್ ಜೈಲು ಅಧಿಕಾರಿಗಳು, ಗಲ್ಲಿಗೇರಿಸಲಿರುವ ವ್ಯಕ್ತಿಯನ್ನು ಮೂರು ದಿನಗಳ ಮುಂಚಿತವಾಗಿ ವರದಿ ಮಾಡುವಂತೆ ಕೇಳಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಈ ತಿಂಗಳ ಆರಂಭದಲ್ಲಿ ದೆಹಲಿ ನ್ಯಾಯಾಲಯದ ಆದೇಶದ ಪ್ರಕಾರ, ನಿರ್ಭಯಾ ಪ್ರಕರಣದ ನಾಲ್ವರು ಆರೋಪಿಗಳು ಮಾರ್ಚ್ 20 ರಂದು ಬೆಳಿಗ್ಗೆ 5.30 ಕ್ಕೆ ಗಲ್ಲಿಗೇರಲಿದ್ದಾರೆ.
ಮರಣದಂಡನೆ ಶಿಕ್ಷೆಗೊಳಗಾದವರು ಮುಖೇಶ್ ಕುಮಾರ್ ಸಿಂಗ್ (32), ಪವನ್ ಗುಪ್ತಾ (25), ವಿನಯ್ ಶರ್ಮಾ (26) ಮತ್ತು ಅಕ್ಷಯ್ ಕುಮಾರ್ ಸಿಂಗ್ (31) ಆಗಿದ್ದಾರೆ.
ಅಪರಾಧಿಗಳು ತಮಗೆ ಲಭ್ಯವಿರುವ ಎಲ್ಲಾ ಕಾನೂನು ಮಾರ್ಗಗಳನ್ನು ಕಂಡುಕೊಂಡು ಮರಣದಂಡನೆಯಿಂದ ತಪ್ಪಿಸಿಕೊಳ್ಳುವ ಪ್ರಯತ್ನಗಳನ್ನು ನಡೆಸಿದ್ದರು. ಇದರಿಂದಾಗಿಯೇ ಇವರಿಗೆ ಶಿಕ್ಷೆ ವಿಳಂಬವಾಗಿದೆ. ನ್ಯಾಯಾಲಯ ಮೂರು ಬಾರಿ ಡೆತ್ ವಾರಂಟ್ ಅನ್ನು ಮುಂದೂಡಿದೆ.
ಹೊಸ ಡೆತ್ ವಾರಂಟ್ ಹೊರಡಿಸಿದ ನಂತರ, ತಿಹಾರ್ ಜೈಲಿನ ಅಧಿಕಾರಿಗಳು ಅಪರಾಧಿಗಳನ್ನು ಗಲ್ಲಿಗೇರಿಸುವಂತೆ ಉತ್ತರ ಪ್ರದೇಶದ ಪವನ್ ಜಲ್ಲಾದ್ ಅವರನ್ನು ಮನವಿ ಮಾಡಿದ್ದಾರೆ. ಅವರು ನಿಗದಿತ ದಿನಕ್ಕಿಂತ ಮೂರು ದಿನ ಮೊದಲು ಅಂದರೆ ಮಾ. 17 ರಂದು ಜೈಲಿಗೆ ಬಂದು ವರದಿ ಮಾಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.