ನವದೆಹಲಿ: ಸುಪ್ರೀಂಕೋರ್ಟ್ನ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಯ್ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನಾಮನಿರ್ದೇಶನಗೊಳಿಸಲಾಗಿದೆ.
ಸೋಮವಾರ ಗೃಹ ಸಚಿವಾಲಯ ಹೊರಡಿಸಿದ ಅಧಿಸೂಚನೆಯಲ್ಲಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗೋಗಯ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನಗೊಳಿಸಿದ್ದಾರೆ ಎಂದು ಘೋಷಿಸಲಾಗಿದೆ.
ರಾಜ್ಯಸಭೆಯ ಗರಿಷ್ಠ ಸಾಮರ್ಥ್ಯ 250 ಸದಸ್ಯರಾಗಿದ್ದು, ಈ ಪೈಕಿ 12 ಮಂದಿಯನ್ನು ಭಾರತದ ರಾಷ್ಟ್ರಪತಿಗಳು ನಾಮನಿರ್ದೇಶನ ಮಾಡಿದ್ದಾರೆ.
ನಾಮನಿರ್ದೇಶಿತ ಸದಸ್ಯರು ಸಾಮಾನ್ಯವಾಗಿ ಸಾಹಿತ್ಯ, ವಿಜ್ಞಾನ, ಕಲೆ ಮತ್ತು ಸಾಮಾಜಿಕ ಸೇವೆಯಲ್ಲಿ ವಿಶೇಷ ಜ್ಞಾನ ಅಥವಾ ಪ್ರಾಯೋಗಿಕ ಅನುಭವ ಹೊಂದಿರುವ ವ್ಯಕ್ತಿಗಳಾಗಿರುತ್ತಾರೆ. ಎಲ್ಲಾ ರಾಜ್ಯಸಭಾ ಸ್ಥಾನಗಳಲ್ಲಿ ಸುಮಾರು ಐದನೇ ಒಂದು ಭಾಗ ಖಾಲಿ ಇದೆ ಮತ್ತು ಮಾರ್ಚ್ 26 ರಂದು ಚುನಾವಣೆ ನಡೆಯಲಿದೆ. ಫಲಿತಾಂಶವು ಅದೇ ದಿನ ಪ್ರಕಟವಾಗಲಿದೆ.
ಗೊಗೊಯ್ ಅವರು ಭಾರತದ 46 ನೇ ಮುಖ್ಯ ನ್ಯಾಯಮೂರ್ತಿಯಾಗಿದ್ದರು ಮತ್ತು 13 ತಿಂಗಳುಗಳ ಕಾಲ ಈ ಹುದ್ದೆಯನ್ನು ಅಲಂಕರಿಸಿದ್ದರು.
ಗೊಗೊಯ್ ತಮ್ಮ ಅಧಿಕಾರಾವಧಿಯಲ್ಲಿ, ಸರ್ಕಾರದ ವಿಷಯಗಳು, ಧರ್ಮ, ರಾಜಕೀಯ, ಮತ್ತು ಕಾನೂನಿನ ಅನ್ವಯಿಕತೆಗೆ ಸಂಬಂಧಿಸಿದ ಪ್ರಮುಖ ಹೆಗ್ಗುರುತು ತೀರ್ಪುಗಳನ್ನು ನೀಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.