ನವದೆಹಲಿ: ಕೊರೋನಾವೈರಸ್ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮ ಹಾಗೂ ಮುನ್ನೆಚ್ಚರಿಕೆಯ ಕುರಿತಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಎಲ್ಲಾ ಬ್ಯಾಂಕುಗಳಿಗೆ ಸುತ್ತೋಲೆಯನ್ನು ಹೊರಡಿಸಿದೆ.
ಬ್ಯಾಂಕ್ ಆವರಣದಲ್ಲಿ ವೈರಸ್ ಹರಡುವಿಕೆಯನ್ನು ಗುರುತಿಸಿ, ತಡೆಯಲು ಅಗತ್ಯ ಕ್ರಮಗಳನ್ನು ರೂಪಿಸುವುದು ಹಾಗೂ ಅನಿವಾರ್ಯ ಪರಿಸ್ಥಿತಿಗಳು ಎದುರಾದ ಸಂದರ್ಭಗಳಲ್ಲಿಯೂ ಬ್ಯಾಂಕ್ ಸೇವೆಗಳಿಗೆ ವ್ಯತ್ಯಯವಾಗದಂತೆ ಅಗತ್ಯ ಮುನ್ನಚರಿಕೆ ಕ್ರಮಗಳನ್ನು ಕೂಡ ರೂಪಿಸಿದೆ ಎಂದು ಆರ್.ಬಿ.ಐ. ಆದೇಶಿಸಿದೆ.
ಕೊರೋನಾವೈರಸ್ ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ಸರಕಾರಗಳು ಕೈಗೊಳ್ಳುವ ಕ್ರಮಗಳ ಬಗ್ಗೆ, ಶಂಕಿತ ಪ್ರಕರಣಗಳಲ್ಲಿ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಿಬ್ಬಂದಿಗಳಿಗೆ ಅಗತ್ಯ ಮಾಹಿತಿ ನೀಡುವುದು ಕಡ್ಡಾಯ ಎಂದು ರಿಜರ್ವ್ ಬ್ಯಾಂಕ್ ತನ್ನ ಸುತ್ತೋಲೆಯಲ್ಲಿ ತಿಳಿಸಿದೆ.
ಗ್ರಾಹಕರಿಗೆ ಡಿಜಿಟಲ್ ಸೇವೆಗಳ ಬಗ್ಗೆ ಜಾಗೃತಿ ಹೆಚ್ಚಿಸುವ ಮೂಲಕ ಡಿಜಿಟಲ್ ಬ್ಯಾಂಕಿಂಗ್ ಸೇವೆ ಪಡೆಯುವಂತೆ ಗ್ರಾಹಕರಿಗೆ ಪ್ರೋತ್ಸಾಹಿಸಬೇಕೆಂದು ಕೂಡ ಸುತ್ತೋಲೆಯಲ್ಲಿ ಆಗ್ರಹಿಸಲಾಗಿದೆ.
ಇಷ್ಟಲ್ಲದೇ ಕೋವಿಡ್ -19, ಬ್ಯಾಂಕಿನ ಆರ್ಥಿಕ ಸ್ಥಿತಿಗತಿ, ಕಾರ್ಯನಿರ್ವಹಣೆ, ಮುಂತಾದವುಗಳ ಮೇಲೆ ಬೀರಬಹುದಾದ ಪರಿಣಾಮಗಳನ್ನು ಎದುರಿಸಲು ಕೂಡ ಸಿದ್ಧರಾಗಬೇಕು ಹಾಗೂ ಒಟ್ಟಾರೆ ಈ ಎಲ್ಲ ಕಾರ್ಯಗಳ ಸಮನ್ವಯಕ್ಕಾಗಿ ಬ್ಯಾಂಕಿನಲ್ಲಿ ಸಶಕ್ತ ತುರ್ತು ಪ್ರತಿಕ್ರಿಯೆ ತಂಡವನ್ನು ರಚಿಸಬೇಕೆಂದು ಹೇಳಿದೆ. ಈ ತಂಡ ಕೋವಿಡ್ 19 ವಿಷಯಕ್ಕೆ ಸಂಬಂಧಿಸಿದಂತೆ ಬಾಹ್ಯ ಸಂಸ್ಥೆಗಳು, ನಿಯಂತ್ರಕ ಸಂಸ್ಥೆಗಳು ಹಾಗೂ ಆಡಳಿತ ಮಂಡಳಿಗಳ ಮಧ್ಯೆ ಕೊಂಡಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಆರ್.ಬಿ.ಐ. ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.