ನವದೆಹಲಿ: ಕೊರೋನವೈರಸ್ ಎಂಬ ಮಹಾಮಾರಿ ದೇಶದ ಆರ್ಥಿಕತೆ ದೊಡ್ಡ ಹೊಡೆತವನ್ನು ನೀಡುತ್ತಿದೆ. ಜನಸಾಮಾನ್ಯರ ದಿನಗೂಲಿಗೂ ಇದು ಮಾರಕವಾಗುತ್ತಿದೆ. ಜನರು ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ಮನೆಯಲ್ಲಿ ಕುಳಿತುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಉತ್ತರಪ್ರದೇಶದ ಯೋಗಿ ಆದಿತ್ಯನಾಥ ಸರ್ಕಾರ ಜನರಿಗೆ ಹಣಕಾಸು ನೆರವು ನೀಡಲು ಮುಂದಾಗಿದೆ.
ರಿಯಲ್ ಟೈಮ್ ಗ್ರಾಸ್ ಸೆಟಲ್ಮೆಂಟ್ (RTGS) ಮೂಲಕ ಅರ್ಹ ದಿನಗೂಲಿ ನೌಕರರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣವನ್ನು ವರ್ಗಾವಣೆ ಮಾಡುವಂತಹ ವ್ಯವಸ್ಥೆಯನ್ನು ಯೋಗಿ ಆದಿತ್ಯನಾಥ ಸರ್ಕಾರ ಸಿದ್ಧಪಡಿಸುತ್ತಿದೆ.
ಇದಕ್ಕಾಗಿ ಯೋಗಿ ಅವರು ಮೂರು ಸದಸ್ಯರುಳ್ಳ ಉನ್ನತ ಮಟ್ಟದ ಸಮಿತಿಯನ್ನು ರಚನೆ ಮಾಡಿದ್ದಾರೆ. ಈ ಸಮಿತಿಯಲ್ಲಿ ಹಣಕಾಸು, ಕೃಷಿ ಮತ್ತು ಕಾರ್ಮಿಕ ಸಚಿವಾಲಯದ ಸಚಿವರು ಇದ್ದಾರೆ. ಮೂರು ದಿನಗಳೊಳಗೆ ಈ ಸಮಿತಿಯು ಯೋಗಿ ಅವರಿಗೆ ವರದಿಯನ್ನು ಸಲ್ಲಿಕೆ ಮಾಡಲಿದೆ.
ಸಿಎಂ ಯೋಗಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ನಂತರ, ಪತ್ರಿಕಾಗೋಷ್ಠಿ ನಡೆಸಿದ ರಾಜ್ಯ ಸಂಪುಟ ಸಚಿವ ಶ್ರೀಕಾಂತ್ ಮಿಶ್ರಾ ಈ ಬೆಳವಣಿಗೆಯನ್ನು ಬಹಿರಂಗಪಡಿಸಿದರು.
ಅಲ್ಲದೇ, ಸಂಪುಟ ಸಭೆಯಲ್ಲಿ, ಸಾರ್ವಜನಿಕರನ್ನು ಈ ಸಾಂಕ್ರಾಮಿಕ ರೋಗದಿಂದ ರಕ್ಷಿಸುವ ಸಲುವಾಗಿ ರಾಜ್ಯದಲ್ಲಿ ಎಲ್ಲಾ ರೀತಿಯ ಪ್ರತಿಭಟನೆ ಮತ್ತು ಸಮಾರಂಭಗಳನ್ನು ನಿಷೇಧಿಸಲು ನಿರ್ಧರಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.