ನವದೆಹಲಿ: ಕೊರೋನವೈರಸ್ ಹಿನ್ನೆಲೆಯಲ್ಲಿ ಯಾವುದೇ ಪ್ರತಿಭಟನೆ ಅಥವಾ ಸಮಾವೇಶಗಳನ್ನು ನಡೆಸದಿರಲು ಬಿಜೆಪಿ ನಿರ್ಧರಿಸಿದೆ ಎಂದು ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಬುಧವಾರ ಹೇಳಿದ್ದಾರೆ.
ಬಿಜೆಪಿಯ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಸಂಸದರರಲ್ಲಿ ಸಣ್ಣ ಗುಂಪುಗಳನ್ನು ಮಾಡಿಕೊಂಡು ಜನರಲ್ಲಿ ಜಾಗೃತಿ ಮೂಡಿಸುವಂತೆ ಕೇಳಿಕೊಂಡ ಒಂದು ದಿನದ ನಂತರ ನಡ್ಡಾ ಅವರು ಈ ಹೇಳಿಕೆಯನ್ನು ನೀಡಿದ್ದಾರೆ. ಏಪ್ರಿಲ್ 15 ರವರೆಗೆ ಯಾವುದೇ ಸಾಮೂಹಿಕ ಆಂದೋಲನವನ್ನು ಪ್ರಾರಂಭಿಸುವುದನ್ನು ತಪ್ಪಿಸಬೇಕೆಂದು ಸೂಚಿಸಿದ್ದಾರೆ.
“ಪ್ರಧಾನಿಯವರು ನಿನ್ನೆ ಸಂಸದೀಯ ಪಕ್ಷದ ಸಭೆಯಲ್ಲಿ, ಕೊರೋನವೈರಸ್ ಕಾರಣದಿಂದ ನಾವು ಯಾವುದೇ ರೀತಿಯ ಆಂದೋಲನ, ಧರಣಿ, ಸಮಾವೇಶಗಳಿಂದ ದೂರವಿರಬೇಕು ಎಂದು ಆಶಿಸಿದ್ರು. ಅದನ್ನು ಗಮನದಲ್ಲಿಟ್ಟುಕೊಂಡು, ಮುಂದಿನ ಒಂದು ತಿಂಗಳವರೆಗೆ ಪಕ್ಷವು ಯಾವುದೇ ರೀತಿಯ ಆಂದೋಲನ, ಪ್ರತಿಭಟನೆಗಳಲ್ಲಿ ಭಾಗವಹಿಸುವುದಿಲ್ಲ” ಎಂದಿದ್ದಾರೆ.
”ಬಿಜೆಪಿಯು ಎಲ್ಲಾ ರಾಜ್ಯ ಘಟಕಗಳಿಗೆ ಈ ಬಗ್ಗೆ ಸುತ್ತೋಲೆಯನ್ನು ಹೊರಡಿಸಿದ್ದು, ಇದರಲ್ಲಿ ಸಣ್ಣ ಸಣ್ಣ ಗುಂಪುಗಳನ್ನು ಮಾಡಿಕೊಂಡು ಕೊರೋನಾ ಬಗ್ಗೆ ಜಾಗೃತಿ ಮುಡಿಸುವಂತೆ,ಇದರೊಂದಿಗೆ ಜನರಿಗೆ ಏನು ಮಾಡಬೇಕು ಏನು ಮಾಡಬಾರದು ಎಂಬುದನ್ನು ತಿಳಿಸುವಂತೆ ಸೂಚಿಸಿದ್ದೇವೆ. ಯಾವುದೇ ಆತಂಕವನ್ನು ಸೃಷ್ಟಿ ಮಾಡಬಾರದು. ನೈರ್ಮಲ್ಯವನ್ನು ಕಾಪಾಡಿಕೊಳ್ಳಬೇಕು” ಎಂದಿದ್ದಾರೆ.
ಪ್ರಧಾನಮಂತ್ರಿಯವರ ಆಶಯವನ್ನು ಗಮನದಲ್ಲಿಟ್ಟುಕೊಂಡು ನಾವು ಎಲ್ಲಾ ಘಟಕಗಳಿಗೂ ಈ ನಿರ್ದೇಶನವನ್ನು ನೀಡಿದ್ದೇವೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.