ನವದೆಹಲಿ: ಕೊರೋನವೈರಸ್ಗೆ ಸಮಬಂಧಿಸಿದಂತೆ ದೇಶದ ಪ್ರಸ್ತುತ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಿನ್ನೆ ಬೆಳಿಗ್ಗೆ ಅವರು COVID-19 ವಿರುದ್ಧ ಹೋರಾಡಲು ನಡೆಯುತ್ತಿರುವ ಪ್ರಯತ್ನಗಳನ್ನು ಪರಿಶೀಲಿಸಲು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು.
“ಪ್ರಧಾನಿ ನರೇಂದ್ರ ಮೋದಿಯವರು ಮಾರ್ಚ್ 19, 2020 ರಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ಅವರು COVID-19 ಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಮತ್ತು ಅದನ್ನು ಎದುರಿಸುವ ಪ್ರಯತ್ನಗಳ ಬಗ್ಗೆ ಮಾತನಾಡಲಿದ್ದಾರೆ” ಎಂದು ಪ್ರಧಾನಮಂತ್ರಿ ಸಚಿವಾಲಯ ಟ್ವೀಟ್ ಮಾಡಿದೆ.
ಭಾರತದಲ್ಲಿ ಬುಧವಾರ ಒಟ್ಟು ಕೊರೋನವೈರಸ್ ಪ್ರಕರಣಗಳ ಸಂಖ್ಯೆ 151 ಕ್ಕೆ ಏರಿದೆ. ಮುನ್ನೆಚ್ಚರಿಕಾ ಕ್ರಮವಾಗಿ, ಅಫ್ಘಾನಿಸ್ಥಾನ, ಫಿಲಿಪೈನ್ಸ್ ಮತ್ತು ಮಲೇಷ್ಯಾದಿಂದ ಪ್ರಯಾಣಿಕರ ಪ್ರವೇಶವನ್ನು ಸರ್ಕಾರ ಈಗಾಗಲೇ ನಿಷೇಧಿಸಿದೆ. ಈ ಮೊದಲು, ಯುರೋಪಿಯನ್ ಒಕ್ಕೂಟದಿಂದ ಪ್ರಯಾಣಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಮತ್ತು ಎಲ್ಲಾ ವಿದೇಶಿ ಪ್ರಜೆಗಳಿಗೆ ಪ್ರಯಾಣ ವೀಸಾಗಳನ್ನು ರದ್ದುಪಡಿಸಲಾಗಿದೆ.
ಕೊರೋನವೈರಸ್ನಿಂದಾಗಿ ಒಟ್ಟು ಸಾವುಗಳು ವಿಶ್ವದಾದ್ಯಂತ 8000ರ ಗಡಿ ದಾಟಿದೆ. ಬುಧವಾರದವರೆಗೆ, 2 ಲಕ್ಷಕ್ಕೂ ಹೆಚ್ಚು ಜನರು ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದಾರೆ. ಚೀನಾ ಅತ್ಯಂತ ಹೆಚ್ಚು ಪೀಡಿತ ದೇಶವಾಗಿದೆ, ಇಟಲಿ ಎರಡನೇ ಸ್ಥಾನದಲ್ಲಿದೆ.
ಪಾಕಿಸ್ಥಾನವು ಬುಧವಾರ, ಕೊರೋನವೈರಸ್ನಿಂದ ಎರಡು ಸಾವುಗಳನ್ನು ದಾಖಲಿಸಿದೆ. ಆ ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 301ಕ್ಕೆ ಏರಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.