ನವದೆಹಲಿ: ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ಕೇಂದ್ರ ಸಚಿವ ರಾಮದಾಸ್ ಅಠಾವಲೆ ಮತ್ತು ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ಸೇರಿದಂತೆ ಒಟ್ಟು 37 ಅಭ್ಯರ್ಥಿಗಳು ಬುಧವಾರ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಮಪತ್ರ ಹಿಂತೆಗೆದುಕೊಳ್ಳುವ ಗಡುವು ಮುಗಿದ ನಂತರ ಬುಧವಾರ ಈ ಆಯ್ಕೆ ನಡೆದಿದೆ.
ಮಾರ್ಚ್ 26 ರಂದು ನಡೆಯಲಿರುವ ಚುನಾವಣೆಗೆ 17 ರಾಜ್ಯಗಳ 55 ರಾಜ್ಯಸಭಾ ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆಯಾಗಿದೆ. ಮಹಾರಾಷ್ಟ್ರದ ಎಲ್ಲಾ ಏಳು ಸ್ಥಾನಗಳಿಗೆ, ತಮಿಳುನಾಡಿನ ಆರು ಸ್ಥಾನಗಳಿಗೆ, ಹರಿಯಾಣ, ಛತ್ತೀಸ್ಗಢ ಮತ್ತು ತೆಲಂಗಾಣದ ತಲಾ ಎರಡು ಸ್ಥಾನಗಳಿಗೆ, ಒರಿಸ್ಸಾದಲ್ಲಿ ನಾಲ್ಕು ಸ್ಥಾನಗಳು, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ ಐದು ಸ್ಥಾನಗಳು, ಅಸ್ಸಾಂನಲ್ಲಿ ಮೂರು ಸ್ಥಾನಗಳು ಮತ್ತು ಹಿಮಾಚಲ ಪ್ರದೇಶದಲ್ಲಿ ಒಂದು ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾದ ಅಭ್ಯರ್ಥಿಗಳ ಹೆಸರನ್ನು ಅಧಿಕಾರಿಗಳು ಘೋಷಿಸಿದ್ದಾರೆ.
ಶೀವಸೇನೆಯ ಪ್ರಿಯಾಂಕ ಚತುರ್ವೇದಿ, ಎಐಎಡಿಎಂಕೆಯ ಎಂ.ತಂಬಿದುರೈ, ತಮಿಳ್ ಮಾನಿಲ ಕಾಂಗ್ರೆಸ್ ಮುಖ್ಯಸ್ಥ ಜಿ.ಕೆ ವಾಸನ್, ವಕೀಲ ಕೆಟಿಎಸ್ ತುಳಸಿ, ಕಾಂಗ್ರೆಸ್ ಪಕ್ಷದ ದೀಪೆಂದರ್ ಸಿಂಗ್ ಹೂಡ ಅವರನ್ನು ಮೇಲ್ಮನೆಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಹರಿಯಾಣದಲ್ಲಿ ಎರಡು, ಮಹಾರಾಷ್ಟ್ರದಲ್ಲಿ ಮೂರು ಮತ್ತು ಹಿಮಾಚಲ ಪ್ರದೇಶ ಮತ್ತು ಬಿಹಾರದಲ್ಲಿ ತಲಾ ಒಂದು ಸ್ಥಾನಗಳನ್ನು ಗೆಲ್ಲಲು ಬಿಜೆಪಿ ಯಶಸ್ವಿಯಾಗಿದೆ. ತೃಣಮೂಲ ಕಾಂಗ್ರೆಸ್ ಮತ್ತು ಬಿಜು ಜನತಾದಳ ಕ್ರಮವಾಗಿ ಪಶ್ಚಿಮ ಬಂಗಾಳ ಮತ್ತು ಒರಿಸ್ಸಾದಲ್ಲಿ ತಲಾ ನಾಲ್ಕು ಸ್ಥಾನಗಳನ್ನು ಗೆದ್ದವು. ಟಿಆರ್ಎಸ್ ತೆಲಂಗಾಣದಲ್ಲಿ ಎರಡು ಸ್ಥಾನಗಳನ್ನು ಗೆದ್ದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.