ನವದೆಹಲಿ: ಗೋಮೂತ್ರದ ಔಷಧೀಯ ಗುಣಗಳ ಬಗ್ಗೆ ಮಾತನಾಡಿದವರನ್ನು ಮೂದಲಿಸುತ್ತಿದ್ದ ಕಾಂಗ್ರೆಸ್ ಪಕ್ಷದ ನಾಯಕರು ಈಗ ಗೋಮೂತ್ರದ ಒಳ್ಳೆಯ ಗುಣಗಳ ಬಗ್ಗೆ ಮಾತನಾಡಲಾರಂಭಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಅವರು ಗೋಮೂತ್ರದ ಉತ್ತಮ ಗುಣಗಳನ್ನು ರಾಜ್ಯಸಭೆಯಲ್ಲಿ ವಿವರಿಸಿದ್ದಾರೆ. ವ್ಯಕ್ತಿಯೊಬ್ಬರು ಗೋಮೂತ್ರ ಕುಡಿಯುವ ಮೂಲಕ ಕ್ಯಾನ್ಸರ್ ರೋಗವನ್ನು ಗುಣಪಡಿಸಿಕೊಂಡ ಕಥೆಯನ್ನು ರಾಜ್ಯಸಭೆಯಲ್ಲಿ ಅವರು ವಿವರಿಸಿದ್ದಾರೆ.
ಮೀರತ್ ಬಳಿಯ ಆಶ್ರಮವೊಂದಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ಗೋ ಮೂತ್ರ ಕುಡಿದು ಕ್ಯಾನ್ಸರ್ ಗುಣಪಡಿಸಿಕೊಂಡ ಕಥೆಯನ್ನು ಹಂಚಿಕೊಂಡಿದ್ದಾರೆ.
ಹೋಮಿಯೋಪತಿ ಮತ್ತು ಭಾರತೀಯ ವೈದ್ಯಕೀಯ ವ್ಯವಸ್ಥೆಗಳಿಗೆ ರಾಷ್ಟ್ರೀಯ ಆಯೋಗಗಳನ್ನು ಸ್ಥಾಪಿಸುವ ಎರಡು ಮಸೂದೆಗಳ ಕುರಿತು ರಾಜ್ಯಸಭೆಯಲ್ಲಿ ನಡೆದ ಚರ್ಚೆಯಲ್ಲಿ ಅವರು ಈ ವಿಷಯವನ್ನು ಹಂಚಿಕೊಂಡಿದ್ದಾರೆ.
ಭಾರತೀಯ ಔಷಧ ವ್ಯವಸ್ಥೆಗಳ ಸದ್ಗುಣಗಳನ್ನೂ ಅವರು ಶ್ಲಾಘಿಸಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿಯ ಅನೇಕ ಮುಖಂಡರು ಗೋಮೂತ್ರದ ಉತ್ತಮ ಗುಣಗಳ ಬಗ್ಗೆ ಮಾತನಾಡಿದರು. ಈ ವೇಳೆ ಕಾಂಗ್ರೆಸ್ ನಾಯಕರು ಕೂಹಕದ ಮಾತುಗಳನ್ನು ಆಡಿದರು.
ಆಸ್ಕರ್ ಫೆರ್ನಾಂಡಿಸ್ ಅವರು ಗೋಮೂತ್ರದ ಬಗ್ಗೆ ಮಾತನಾಡುವಾಗ ಕಾಂಗ್ರೆಸ್ ನಾಯಕರು ಅವರ ಬಾಯಿ ಮುಚ್ಚುವ ಪ್ರಯತ್ನಗಳನ್ನು ನಡೆಸಿದರು. ಆದರೆ ಇದನ್ನು ಗಣನೆಗೆ ತೆಗೆದುಕೊಳ್ಳದೆ ಅವರು ತಮ್ಮ ಮಾತನ್ನು ಮುಂದುವರೆಸಿ ಗೋಮೂತ್ರದ ಉತ್ತಮ ಗುಣಗಳನ್ನು ಕೊಂಡಾಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.