ನವದೆಹಲಿ: ಕೋವಿಡ್-19 ಪೀಡಿತ ದೇಶಗಳಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ಪ್ರಜೆಗಳ ಮೂಲಕ ಕೊರೋನಾವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ, ಭಾರತೀಯ ನೌಕಾಪಡೆಯು ವಿಶಾಖಪಟ್ಟಣಂನ ಈಸ್ಟರ್ನ್ ನೇವಲ್ ಕಮಾಂಡ್ (ಇಎನ್ಸಿ) ಯಲ್ಲಿ ಐಎನ್ಎಸ್ ವಿಶ್ವಕರ್ಮದಲ್ಲಿ ಸಂಪರ್ಕ ತಡೆಯನ್ನು ಸ್ಥಾಪಿಸಿದೆ.
ವರದಿಯ ಪ್ರಕಾರ, ಈ ಶಿಬಿರದಲ್ಲಿ 200 ಜನರು ವಾಸಿಸಬಹುದು ಮತ್ತು ಸ್ಥಳಾಂತರಿಸಿದ ಭಾರತೀಯರನ್ನು ಪ್ರತ್ಯೇಕಿಸಲು ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಇಲ್ಲಿ ಹೊಂದಲಾಗಿದೆ.
ಸ್ಥಳಾಂತರಿಸಲ್ಪಟ್ಟ ಜನರ ಸಾಮಾಜಿಕ ಅಂತರವನ್ನು ಖಚಿತಪಡಿಸಿಕೊಳ್ಳಲು ಸಿಬ್ಬಂದಿಗಳು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ 14 ದಿನಗಳವರೆಗೆ ಸಂಪರ್ಕತಡೆಯಲ್ಲಿ ಇವರನ್ನು ಇರಿಸಲಾಗುತ್ತದೆ. ಸಿಬ್ಬಂದಿಗಳು ಕೂಡ ಅಗತ್ಯ ಮುನ್ನಚ್ಚರಿಕೆಯಲ್ಲಿ ಇರಲಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸೂಚನೆಯಂತೆ ನೌಕಾ ಸಿಬ್ಬಂದಿ ಮತ್ತು ಇಎನ್ಸಿಯ ವೈದ್ಯಕೀಯ ವೃತ್ತಿಪರರ ತಂಡವು ವೈದ್ಯಕೀಯ ಮೇಲ್ವಿಚಾರಣೆಯನ್ನು ಕೈಗೊಳ್ಳಲಿದೆ.
ಸ್ಥಳಾಂತರಿಸಿದ ಎಲ್ಲ ಜನರಿಗೆ ಎಲ್ಲಾ ಅಗತ್ಯ ನೆರವನ್ನು ನೀಡಲಾಗುತ್ತದೆ, ವೈರಸ್ ಹರಡುವುದನ್ನು ತಡೆಯಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ.
ಭಾರತದಲ್ಲಿ ಈವರೆಗೆ ವರದಿಯಾಗಿರುವ ಒಟ್ಟು ಪ್ರಕರಣಗಳ ಸಂಖ್ಯೆ 168 ಕ್ಕೆ ಏರಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.