ನವದೆಹಲಿ: ನಿರ್ಭಯಾ ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳಾದ ಮುಖೇಶ್ ಸಿಂಗ್, ಪವನ್ ಗುಪ್ತಾ, ಅಕ್ಷಯ್ ಠಾಕೂರ್, ವಿನಯ್ ಶರ್ಮಾ ಅವರನ್ನು ಶುಕ್ರವಾರ ಬೆಳಿಗ್ಗೆ 5.30 ಕ್ಕೆ ಗಲ್ಲಿಗೇರಿಸಲಾಗಿದೆ. 7 ವರ್ಷಗಳ ಬಳಿಕ ನಿರ್ಭಯಾಳಿಗೆ ನ್ಯಾಯ ಸಿಕ್ಕ ಬಗ್ಗೆ ಆಕೆಯ ತಾಯಿ ಹರ್ಷ ವ್ಯಕ್ತಪಡಿಸಿದ್ದಾರೆ. ವಿಜಯದ ಸಂಕೇತವನ್ನು ತೋರಿಸುವ ಮೂಲಕ ಅವರು ನ್ಯಾಯವನ್ನು ಸ್ವಾಗತಿಸಿದ್ದಾರೆ.
ನ್ಯಾಯದಾನ ವಿಳಂಬವಾದರೂ ಸಿಕ್ಕಿತು ಎಂಬ ಹರ್ಷ ಅವರ ಮುಖದಲ್ಲಿ ಇತ್ತು.. ಮಾರ್ಚ್ 20 ನಿಜಕ್ಕೂ ಹೆಣ್ಣುಮಕ್ಕಳ ದಿನವಾಗಿದೆ ಮತ್ತು ಇಂತಹ ಘೋರ ಅಪರಾಧಗಳನ್ನು ಮಾಡಲು ಪ್ರಯತ್ನಿಸುವವರಿಗೆ ಇದು ಪಾಠವಾಗಲಿದೆ ಎಂದು ಆಶಾ ದೇವಿ ಹೇಳಿದ್ದಾರೆ.
ಸುಪ್ರೀಂಕೋರ್ಟ್ನಿಂದ ಹೊರಬಂದ ನಿರ್ಭಯಾ ಪರ ವಕೀಲರನ್ನು ಆಶಾ ದೇವಿ ತಬ್ಬಿಕೊಂಡು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದರು ಮತ್ತು ನ್ಯಾಯಕ್ಕಾಗಿ ಏಳು ವರ್ಷಗಳ ಕಾಲ ನಡೆದ ಹೋರಾಟದ ಸಂದರ್ಭದಲ್ಲಿ ತಮ್ಮೊಂದಿಗೆ ನಿಂತಿದ್ದಕ್ಕಾಗಿ ದೇಶದ ಜನರಿಗೆ ಧನ್ಯವಾದ ಅರ್ಪಿಸಿದರು.
ನ್ಯಾಯಕ್ಕಾಗಿ ಹೋರಾಟದ ಸಮಯದಲ್ಲಿ ತಮ್ಮನ್ನು ಬೆಂಬಲಿಸಿದ್ದಕ್ಕಾಗಿ ಆಶಾ ದೇವಿ ಸರ್ಕಾರ, ಜನತೆಗೆ ಧನ್ಯವಾದ ಅರ್ಪಿಸಿದರು ಮತ್ತು ಇಡೀ ರಾತ್ರಿ ನಿದ್ರೆ ಮಾಡಡೆ ಅಂತಿಮ ತೀರ್ಪನ್ನು ಕೇಳಲು ಕಾಯುತ್ತಿದ್ದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದರು. ” ನಾನು ಅವಳ ಜೀವವನ್ನು ಉಳಿಸಲು ಸಾಧ್ಯವಾಗದಿದ್ದರೂ, ಇಂದು ನಾನು ನಿರ್ಭಯ ತಾಯಿಯಾಗಿ ನನ್ನ ಜವಾಬ್ದಾರಿಯನ್ನು ಪೂರೈಸಿದೆ” ಎಂದಿದ್ದಾರೆ.
ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿಯನ್ನು ಚಲಿಸುವ ಬಸ್ಸಿನಲ್ಲಿ ಅತ್ಯಾಚಾರಕ್ಕೊಳಪಡಿಸಿ ತೀವ್ರ ಸ್ವರೂಪದಲ್ಲಿ ಹಲ್ಲೆ ನಡೆಸಲಾಗಿತ್ತು. ಕೆಲ ದಿನಗಳ ಚಿಕಿತ್ಸೆಯ ಬಳಿಕ ಆಕೆ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಳು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.