ನವದೆಹಲಿ: ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿರುವ ಮಧ್ಯಪ್ರದೇಶದ 16 ಮಂದಿ ಬಂಡಾಯ ಕಾಂಗ್ರೆಸ್ ಶಾಸಕರ ರಾಜೀನಾಮೆಯನ್ನು ಮಧ್ಯಪ್ರದೇಶದ ವಿಧಾನಸಭೆ ಸ್ಪೀಕರ್ ನರ್ಮದಾ ಪ್ರಸಾದ್ ಪ್ರಜಾಪತಿ ಅಂಗೀಕರಿಸಿದ್ದಾರೆ. ಈ ಮೂಲಕ ಕಮಲ್ ನಾಥ್ ಸರ್ಕಾರ ಶುಕ್ರವಾರ ಅಧಿಕಾರದಿಂದ ಕೆಳಗಿಳಿಯುವುದು ಅನಿವಾರ್ಯವಾಗಿದೆ.
ಶುಕ್ರವಾರದ ವಿಶ್ವಾಸ ಮತಯಾಚನೆಯ ಸಂದರ್ಭದಲ್ಲಿ ಗೆಲುವು ಸಾಧಿಸುವ ತೀವ್ರ ಪ್ರಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ, ಇದಕ್ಕಾಗಿ ಮೂರು ಸಭೆಗಳನ್ನು ಅದು ರಾತ್ರಿ 10.45 ರವರೆಗೂ ನಡೆಸಿತ್ತು. ಆದರೆ ಕಾಂಗ್ರೆಸ್ ಪಾಲಿಗೆ ವಿಜಯ ಗಳಿಸುವುದು ಅಸಾಧ್ಯ ಎಂಬುದು ಈಗಾಗಲೇ ಖಚಿತಪಟ್ಟಿದೆ. ಹೀಗಾಗಿ ವಿಶ್ವಾಸಮತಯಾಚನೆಯಲ್ಲಿ ಭಾಗವಹಿಸುವ ಬದಲು ನೇರವಾಗಿ ಅದು ಸರ್ಕಾರದಿಂದ ಕೆಳಗಿಳಿಯುವ ನಿರೀಕ್ಷೆ ಇದೆ.
ಕೆಲ ದಿನಗಳಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಂಡಾಯ ಎದ್ದಿರುವ 16 ಮಂದಿ ಕಾಂಗ್ರೆಸ್ ಶಾಸಕರು ಬೆಂಗಳೂರಿನ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಇವರ ಮನವೊಲಿಸಲು ಕಾಂಗ್ರೆಸ್ ಎಲ್ಲಾ ತರನಾದ ಪ್ರಯತ್ನಗಳನ್ನು ನಡೆಸಿತ್ತು. ಆದರೆ ಈಗ ಕಾಂಗ್ರೆಸ್ ಪಕ್ಷದ ಎಲ್ಲಾ ಪ್ರಯತ್ನಗಳು ಮುಕ್ತಾಯವಾಗಿದ್ದು, ಬಂಡಾಯ ಶಾಸಕರು ತಮ್ಮ ನಿರ್ಧಾರವನ್ನು ಬದಲಾಯಿಸದಿರಲು ನಿರ್ಧರಿಸಿದ್ದಾರೆ. ಈಗಾಗಲೇ ಸ್ಪೀಕರ್ ಅವರ ರಾಜೀನಾಮೆಯನ್ನೂ ಅಂಗೀಕರಿಸಿದ್ದಾರೆ.
ಹೀಗಾಗಿ ಮಧ್ಯಪ್ರದೇಶದಲ್ಲಿ ಮತ ಬಿಜೆಪಿ ಪಕ್ಷ ಅಧಿಕಾರಕ್ಕೆ ಏರುವ ಸಾಧ್ಯತೆ ಇದೆ. ನಿನ್ನೆ ಮಧ್ಯರಾತ್ರಿಯವರೆಗೂ ಬಿಜೆಪಿ ಸಭೆಯನ್ನು ನಡೆಸಿದೆ. ಅಲ್ಲದೇ ರೆಸಾರ್ಟ್ನಿಂದ ಭೋಪಾಲದಲ್ಲಿರುವ ವಿಧಾನಸಭೆಗೆ ಆಗಮಿಸುವ ಶಾಸಕರಿಗೆ ಬಿಗಿ ಭದ್ರತೆಯನ್ನು ಒದಗಿಸಬೇಕು ಎಂದು ಆಗ್ರಹಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.